Top Newsರಾಜಕೀಯರಾಜ್ಯಸುದ್ದಿ

ರಾಜ್ಯ ಸರ್ಕಾರದ ವಿರುದ್ಧ ಮಾಜಿ ಡಿಸಿಎಂ ಈಶ್ವರಪ್ಪ ಗುಡುಗು!

ಹುಬ್ಬಳ್ಳಿ: ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಕರ್ನಾಟಕವು ಮುಸಲ್ಮಾನರಿಗೆ ಸ್ವರ್ಗ ಮತ್ತು ಹಿಂದೂಗಳಿಗೆ ನರಕವಾಗಿದೆ ಎಂದು ಕಿಡಿಕಾರಿದ್ದಾರೆ.

ಮದ್ದೂರು, ನಾಗಮಂಗಲ ಸೇರಿದಂತೆ ವಿವಿಧೆಡೆ ನಡೆದ ಗಲಭೆಗಳನ್ನು ಉಲ್ಲೇಖಿಸಿದ ಅವರು, ಮಸೀದಿಗಳಿಂದ ಕಲ್ಲು ಮತ್ತು ಚಪ್ಪಲಿ ತೂರಾಟ ನಡೆದರೂ ಸರ್ಕಾರ ಯಾವುದೇ ಕಠಿಣ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು. ರಾಷ್ಟ್ರದ್ರೋಹಿ ಚಟುವಟಿಕೆ ನಡೆಸುವವರನ್ನು ಕಾಂಗ್ರೆಸ್ ಸರ್ಕಾರ ರಕ್ಷಿಸುತ್ತಿದೆ ಮತ್ತು ಮುಂದಿನ ಚುನಾವಣೆಯು ಹಿಂದುತ್ವದ ಆಧಾರದ ಮೇಲೆ ನಡೆಯಲಿದೆ ಎಂದು ಅವರು ಭವಿಷ್ಯ ನುಡಿದರು.

Comments (0)

Your email address will not be published. Required fields are marked *

Back to top button