Wednesday, April 30, 2025
35.6 C
Bengaluru
LIVE
ಮನೆಸುದ್ದಿಬೆಳಗಾವಿಯಲ್ಲಿ ಗೋವು ಸಾಗಿಸುತ್ತಿದ್ದ ಲಾರಿ ಚಾಲಕನನ್ನು ತಡೆದ ಹಿಂದು ಪರ ಸಂಘಟನೆ ಕಾರ್ಯಕರ್ತರು.

ಬೆಳಗಾವಿಯಲ್ಲಿ ಗೋವು ಸಾಗಿಸುತ್ತಿದ್ದ ಲಾರಿ ಚಾಲಕನನ್ನು ತಡೆದ ಹಿಂದು ಪರ ಸಂಘಟನೆ ಕಾರ್ಯಕರ್ತರು.

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದ ಮುಂಭಾಗದಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಲಾರಿ ಚಾಲಕನಿಗೆ 50ಕ್ಕೂ ಹೆಚ್ಚು ಹಿಂದೂಪರ ಕಾರ್ಯಕರ್ತರು ಥಳಿಸಿದ್ದಾರೆ.

ಮಹಾರಾಷ್ಟ್ರದಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಲಾರಿಯನ್ನು ಹೆದ್ದಾರಿಯಲ್ಲಿ ತಡೆದ ಹಿಂದೂ ಕಾರ್ಯಕರ್ತರು ಚಾಲಕನನ್ನು ಲಾರಿಯಿಂದ ಹೊರಗೆಳೆದು ತೀವ್ರವಾಗಿ ಥಳಿಸಿದ್ದಾರೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿರುವ ಕಾಸರಗೋಡು ಮೂಲದ ಲಾರಿ ಚಾಲಕ ಉಮರ್ ಮೋಯಿದ್ದೀನ್ ನನ್ನು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ದೌಡಾಯಿಸಿದ ಡಿಸಿಪಿ ರೋಹನ್ ಜಗದೀಶ್ ಪರಿಶೀಲನೆ ನಡೆಸಿದ್ದು ಹಿರೇಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆ ನಡೆಸಿದವರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳುತ್ತೇವೆ. ಸಂಜೆ ಗೋವುಗಳನ್ನು ಸಾಗಿಸುತ್ತಿದ್ದ ವಾಹನ ತಡೆದ ಹಿಂದೂ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಚಾಲಕ ಹಾಗೂ ಕ್ಲೀನರ್ ಗೆ ಗಂಭೀರ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ರೋಹನ್ ಜಗದೀಶ್ ಹೇಳಿದ್ದಾರೆ.

ಅಕ್ರಮವಾಗಿ ಗೋವು ಸಾಗಿಸುತ್ತಿದ್ದರೆ ಅವರ ವಿರುದ್ಧ ಪ್ರಕರಣ ದಾಖಲಾಗಿಸಲಾಗುತ್ತದೆ. ಹಲ್ಲೆ ಮಾಡಿದವರ ಮೇಲೆಯೂ ಕೇಸ್ ದಾಖಲಿಸಿ ತನಿಖೆ ಮಾಡುತ್ತೇವೆ ಎಂದು ರೋಹನ್ ಜಗದೀಶ್ ತಿಳಿಸಿದ್ದಾರೆ. ಸದ್ಯ ಲಾರಿಯಲ್ಲಿದ್ದ 28 ಗೋವುಗಳನ್ನು ಕಮಕಾರಟ್ಟಿಯಲ್ಲಿರುವ ಮಹಾವೀರ ಗೋ ಶಾಲೆಗೆ ಶಿಫ್ಟ್ ಮಾಡಲಾಗಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments