
ಬೆಂಗಳೂರು: ಕೇಂದ್ರ ಸರಕಾರದ ಬರ ಪರಿಹಾರ ನೀಡಿಕೆ ಅನ್ಯಾಯದ ವಿರುದ್ಧ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರ ನೇತೃತ್ವದಲ್ಲಿ ಮಂತ್ರಿ ಮಹೋದಯರು ವಿಧಾನಸೌಧ ಆವರಣದ ಮಹಾತ್ಮ ಗಾಂಧಿ ಅವರ ಪ್ರತಿಮೆ ಬಳಿ ಭಾನುವಾರ ಪ್ರತಿಭಟನೆ ಮಾಡಿದರು.

ಸಚಿವರಾದ ಡಾ. ಜಿ. ಪರಮೇಶ್ವರ, ರಾಮಲಿಂಗಾರೆಡ್ಡಿ, ಕೃಷ್ಣಬೈರೇಗೌಡ, ಚಲುವರಾಯಸ್ವಾಮಿ, ದಿನೇಶ್ ಗುಂಡೂರಾವ್, ಕೆ ಎಚ್ ಮುನಿಯಪ್ಪ, ಶಾಸಕರಾದ ಎಚ್ ಸಿ ಬಾಲಕೃಷ್ಣ, ರಿಜ್ವಾನ್ ಅರ್ಷದ್ ಮತ್ತಿತರರು ಭಾಗವಹಿಸಿದ್ದರು.




