Wednesday, January 28, 2026
24.9 C
Bengaluru
Google search engine
LIVE
ಮನೆರಾಜಕೀಯಸಂತ್ರಸ್ತೆ ಕಿಡ್ನಾಪ್ ಪ್ರಕರಣ ; ಶಾಸಕ HD ರೇವಣ್ಣರಿಗೆ ಬಿಗ್ ರಿಲೀಫ್

ಸಂತ್ರಸ್ತೆ ಕಿಡ್ನಾಪ್ ಪ್ರಕರಣ ; ಶಾಸಕ HD ರೇವಣ್ಣರಿಗೆ ಬಿಗ್ ರಿಲೀಫ್

ಬೆಂಗಳೂರು: ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಳೆ ನರಸೀಪುರ ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಈ ಕುರಿತಂತೆ ಆದೇಶ ಹೊರಡಿಸಿದ್ದು, ಎಚ್ ಡಿ ರೇವಣ್ಣ ಅವರು 5 ಲಕ್ಷ ಬಾಂಡ್ ನೀಡಬೇಕು, ಸಾಕ್ಷಾಧಾರವನ್ನು ನಾಶಪಡಿಸಬಾರದು, ಎಸ್‌ಐಟಿ ತನಿಖೆಗೆ ಸಹಕರಿಸಬೇಕು ಎಂದು ಷರತ್ತು ಬದ್ಧ ಜಾಮೀನು ನೀಡಲಾಗಿದೆ.

ರೇವಣ್ಣ ಅವರ ಪರವಾಗಿ ಸಿವಿ ನಾಗೇಶ್ ಅವರು ವಾದ ಮಂಡಿಸಿದ್ದು, ಅದೇ ರೀತಿಯಾಗಿ ಎಸ್‌ಐಟಿ ಪರವಾಗಿ ಜಾಯ್ನ ಕೊಥಾರಿ ವಾದ ಮಂಡಿಸಿದ್ದರು ಇದೀಗ ವಾದ ಮತ್ತು ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರು ಎಚ್‌ಡಿ ರೇವಣ್ಣ ಅವರಿಗೆ 5 ಲಕ್ಷ ಬಾಂಡ್ ನೀಡಿ ಶರತ್ತು ಬದ್ಧ ಜಾಮೀನು ನೀಡಿದೆ.

ಜಾಮೀನು ಮಂಜೂರು ಆದೇಶ ಪರಪ್ಪನ ಅಗ್ರಹಾರದ ಕಾರಾಗೃಹ ಅಧಿಕಾರಿಗಳ ಕೈ ಸೇರುತ್ತಿದ ನಂತರ ರೇವಣ್ಣ ಅವರ ಬಿಡುಗಡೆ ಸಾಧ್ಯವಿಲ್ಲ. ಈ ನಡುವೆ ಕೆಲವು ಕಾನೂನು ಪ್ರಕ್ರಿಯೆಗಳು ಇರಲಿದ್ದು, ಹಾಗಾಗಿ ನಾಳೆ ಎಚ್ ಡಿ ರೇವಣ್ಣ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಮಾಡುವ ಸಾಧ್ಯತೆ ಬಗ್ಗೆ ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments