Tuesday, March 3, 2026
28.1 C
Bengaluru
Google search engine
LIVE
ಮನೆಕ್ರೈಂ ಸ್ಟೋರಿಕ್ಷುಲ್ಲಕ ಕಾರಣಕ್ಕೆ ಚಾಕು ಇರಿದು ವ್ಯಕ್ತಿ ಕೊಲೆ...

ಕ್ಷುಲ್ಲಕ ಕಾರಣಕ್ಕೆ ಚಾಕು ಇರಿದು ವ್ಯಕ್ತಿ ಕೊಲೆ…

ಬೆಂಗಳೂರು : ಕ್ಷುಲ್ಲಕ ಕಾರಣಕ್ಕೆ ಚಾಕು ಇರಿದು ವ್ಯಕ್ತಿಯನ್ನು ಕೊಲೆ ಮಾಡಿರುವಂತಹ ಘಟನೆ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯ ಹೆಮ್ಮಿಗೆಪುರದಲ್ಲಿ ಘಟನೆ ನಡೆದಿದೆ.

49 ವರ್ಷದ ಪಂಚಲಿಂಗ ಮೃತ ದುರ್ದೈವಿಯಾಗಿದ್ದು, ಲಾರಿಯಲ್ಲಿನ ಮರಳು ಅನ್ ಲೋಡಿಂಗ್ ಕೆಲಸ ಮಾಡ್ತಿದ್ದ. ನಿನ್ನೆ ಲಾರಿ ಮನೆ ಬಳಿ ಓಡಾಡುವಾಗ ಧೂಳು ಎಂದು ಕ್ಷುಲ್ಲಕ ಕಾರಣಕ್ಕೆ ಗಲಾಟೆ ಉಂಟಾಗಿ ಪಂಚಲಿಂಗ ಅದೇ ಊರಿನ ಚಿರಂಜೀವಿ ಎಂಬಾತನ ಜೊತೆ ಗಲಾಟೆ ಮಾಡಿದ್ದ ಎಂದು ಹೇಳಲಾಗಿದೆ.

ನೆನ್ನೆ ರಾತ್ರಿ ಇಬ್ಬರು ಸ್ನೇಹಿತರನ್ನ ಕರೆತಂದು ಅದೇ ದ್ವೇಷಕ್ಕೆ ಪಂಚಲಿಂಗನಿಗೆ ಚಿರಂಜೀವಿ ಚಾಕು ಇರಿದಿದ್ದಾನೆ.  ತೀವ್ರ ರಕ್ತಸ್ರಾವದಿಂದ ಪಂಚಲಿಂಗ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಆರೋಪಿ ಚಿರಂಜೀವಿ ಪರಾರಿ ಅಲ್ಲಿಂದ ಪರಾರಿಯಾಗಿದ್ದಾನೆ. ತಲಘಟ್ಟ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments