ರಾಜ್ಯವೈರಲ್ ನ್ಯೂಸ್ಸುದ್ದಿ
ಬೆಂಗಳೂರಿಂದ ಗೋಕರ್ಣಕ್ಕೆ ಹೋಗ್ತಿದ್ದ ಬಸ್ ಅಪಘಾತ – 25ಕ್ಕೂ ಹೆಚ್ಚು ಮಂದಿಗೆ ಗಾಯ

ಚಿತ್ರದುರ್ಗ : ಬೆಂಗಳೂರಿಂದ ಗೋಕರ್ಣಕ್ಕೆ ಬರುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಮೃತಟ್ಟು 25ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಬಳಿ ನಡೆದಿದೆ. ಮೃತಪಟ್ಟ ದೇಹಗಳನ್ನು ಹೊಳಲ್ಕೆರೆ ತಾಲೂಕಿನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

25ಕ್ಕೂ ಹೆಚ್ಚು ಗಾಯಾಳುಗಳನ್ನ ಚಿಕಿತ್ಸೆಗಾಗಿ ಚಿತ್ರದುರ್ಗ ಹಾಗೂ ಹೊಳಲ್ಕೆರೆ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣದಾಖಲಾಗಿದೆ.




