Tuesday, June 24, 2025
26.4 C
Bengaluru
Google search engine
LIVE
ಮನೆಧರ್ಮಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾಗಿ ಹಬ್ಬದ ಶುಭಾಶಯ ತಿಳಿಸಿದ ; ಸಚಿವ ಸಂತೋಷ ಲಾಡ್

ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾಗಿ ಹಬ್ಬದ ಶುಭಾಶಯ ತಿಳಿಸಿದ ; ಸಚಿವ ಸಂತೋಷ ಲಾಡ್

ಹುಬ್ಬಳ್ಳಿ : ಮುಸ್ಲಿಂ ಸಮುದಾಯದ ಪ್ರಮುಖ ಹಬ್ಬಗಳಲ್ಲಿ ಒಂದಾದ ಪವಿತ್ರ ರಂಜಾನ ಹಬ್ಬವನ್ನು ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅತ್ಯಂತ ಸಡಗರ ಸಂಭ್ರಮದಿಂದ ಆಚರಣೆ ಮಾಡಲಾಯಿತು. ರಂಜಾನ್ ಹಬ್ಬದ ಮುಖ್ಯ ಭಾಗವಾಗಿರುವ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾದ ಮಸ್ಲಿಂರು ಪ್ರಾರ್ಥನೆ ಮುಗಿಸಿದ ಬಳಿಕ ಅಪ್ಪುಗೆ ನೀಡಿ ಒಬ್ಬರಿಗೊಬ್ಬರು ಹಬ್ಬದ ಶುಭಾಶಯವನ್ನು ಹೇಳಿಕೊಳುತ್ತಾರೆ.

ನಗರದ ಕಿತ್ತೂರು ರಾಣಿ ಚೆನ್ನಮ್ಮ ಮೈದಾನದಲ್ಲಿ ಮುಸ್ಲಿಂ ಧರ್ಮ ಗುರುಗಳು ಸಾಮೂಹಿಕ ಪ್ರಾರ್ಥನೆ ಭೋಧಿಸುವ ಮೂಲಕ ಚಾಲನೆ ನೀಡಿದ್ದು, ಭಕ್ತಿ ಭಾವದೊಂದಿಗೆ ಉಳಿದಂತೆ ಸರ್ವ ಮುಸ್ಲಿಂ ಸಮುದಾಯದವರು ಪ್ರಾರ್ಥನೆ ಮಾಡಿದರು. ‌ಜೋರು ಬಿಸಿಲಿನ ನಡುವೆಯೂ ಹೊಸ ಬಟ್ಟೆ‌ ಧರಿಸಿ ಮಕ್ಕಳು ತಮ್ಮ ಕುಟುಂಬದ ಸಂಬಂಧಿಯೊಂದಿಗೆ ಪ್ರಾರ್ಥನೆಯಲ್ಲಿ ಭಾಗಿಯಾಗಿ ಹಬ್ಬ ಆಚರಣೆ ಮಾಡಿರುವುದು ವಿಶೇಷವಾಗಿತ್ತು.

ಸಾಮೂಹಿಕ ಪ್ರಾರ್ಥನೆಯಲ್ಲಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಹು-ಧಾ ಪೂರ್ವ ವಿಧಾನಸಭಾ ಶಾಸಕ ಪ್ರಸಾದ್ ಅಬ್ಬಯ್ಯ ಸೇರಿದಂತೆ ಕಾಂಗ್ರೆಸ್‌ನ ಹಿರಿಯ ನಾಯಕರು, ಹುಬ್ಬಳ್ಳಿಯ ಅಂಜುಮನ್ ಸಂಸ್ಥೆಯ ಪದಾಧಿಕಾರಿಗಳು ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾಗಿ, ಹಬ್ಬದ ಶುಭಾಶಯವನ್ನು ತಿಳಿಸಿದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments