Wednesday, April 30, 2025
34.5 C
Bengaluru
LIVE
ಮನೆಕ್ರೈಂ ಸ್ಟೋರಿನೇಹಾ ಕೇಸ್‌ನಲ್ಲಿ ಕ್ರಮ ಕೈಗೊಳ್ಳಿ; ಡಿಜಿಗೆ ಸಿಎಂ ಸೂಚನೆ

ನೇಹಾ ಕೇಸ್‌ನಲ್ಲಿ ಕ್ರಮ ಕೈಗೊಳ್ಳಿ; ಡಿಜಿಗೆ ಸಿಎಂ ಸೂಚನೆ

ಹುಬ್ಬಳ್ಳಿ: ನಗರದಲ್ಲಿ ಅಮಾನವೀಯ ಘಟನೆ ನಡೆದಿದೆ. ಕಾರ್ಪೊರೇಟರ್ ಮಗಳಾದ ನೇಹಾ ಹಿರೇಮಠ ಎಂಬ ಯುವತಿಯ ಬರ್ಬರ ಹತ್ಯೆಯಾಗಿದೆ. ಇದನ್ನು ನೋಡಿದರೆ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾನೂನು ಸುವ್ಯವಸ್ಥಿತ ಹದೆಗಟ್ಟಿದೆ ಎಂಬುದು ಗೊತ್ತಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಹೇಳಿದರು. ಕಿಮ್ಸ್‌ನ ಶವಾಗಾರಕ್ಕೆ ಭೇಟಿ ನೀಡಿ ಮೃತಳ ತಂದೆಯಿಂದ ಮಾಹಿತಿ ಪಡೆದ ಬಳಿ ಅವರು ಮಾತನಾಡಿದರು.

ಸರ್ಕಾರದ ತುಷ್ಟೀರಣ ನೀತಿ ಕಾರಣದಿಂದ ರಾಜ್ಯದಲ್ಲಿ ಸಮಾಜಘಾತಕರಿಗೆ ಭಯ ಇಲ್ಲದಂತಾಗಿದೆ. ಇಂತಹ ಘಟನೆಗಳನ್ನು ಕಾಂಗ್ರೆಸ್ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ನಾನು ಮೃತ ಯುವತಿ ತಂದೆ, ಕಾರ್ಪೊರೇಟರ್ ನಿರಂಜನ್ ಹಿರೇಮಠ ಅವರೊಂದಿಗೆ ಮಾತನಾಡಿದ್ದೇನೆ. ಈ ಪ್ರಕರಣದ ಬಗ್ಗೆ ಸಮಗ್ರ ತನಿಖೆ ಆಗಬೇಕು. ಅಮಾಯಕ ಹೆಣ್ಣು ಮಗಳ ಕೊಲೆಯಾಗಿದೆ. ಈ ಕುರಿತು ರಾಜ್ಯದ ಗೃಹ ಸಚಿವರ ಜಿ.ಪರಮೇಶ್ವರ್​ ಅವರು ಏನು ಉತ್ತರ ಕೊಡುತ್ತಾರೆ? ಎಂದು ಪ್ರಶ್ನಿಸಿದರು.

ಕೊಲೆ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು, ಕಠಿಣ ಶಿಕ್ಷೆ ವಿಧಿಸಬೇಕು. ಯಾರು ವಕೀಲರು ಕೂಡ ಆರೋಪಿ ಪರ ವಕಾಲತ್ತು ವಹಿಸಿಕೊಳ್ಳಬಾರದು ಎಂದು ಮನವಿ ಮಾಡಿದರು.

ನೇಹಾ ಹತ್ಯೆಗೆ ಸಿಎಂ ಸಂತಾಪ

ಹುಬ್ಬಳ್ಳಿಯಲ್ಲಿ ಕಾರ್ಪೋರೇಟರ್‌ ಮಗಳು ನೇಹಾ ಹಿರೇಮಠ ಹತ್ಯೆಯನ್ನು ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ. ಘಟನೆ ಸಂಬಂಧ ಯಾರೊಬ್ಬರೂ ಉದ್ವೇಗಕ್ಕೆ ಒಳಗಾಗಿ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ಹೇಳಿದ್ದಾರೆ

ಹುಬ್ಬಳ್ಳಿ ಕೊಲೆ ಪ್ರಕರಣದ ತನಿಖೆಯನ್ನು ಎಸ್​ಐಟಿಗೆ ನೀಡಬೇಕು – ಬೊಮ್ಮಾಯಿ

ಮತ್ತೊಂದೆಡೆ, ಕಿಮ್ಸ್‌ಗೆ ಭೇಟಿ ನೀಡಿದ ಬಳಿಕ ಮಾಜಿ ಸಿಎಂ ಬಸವರಾಜ್​ ಬೊಮ್ಮಾಯಿ ಮಾತನಾಡಿ, ಹುಬ್ಬಳಿಯ ಯುವತಿಯ ಕೊಲೆ ಅತ್ಯಂತ ದುಃಖಕರ ಮತ್ತು ಆಘಾತಕಾರಿ ಘಟನೆಯಾಗಿದೆ. ನಾವು ಯಾರು ಇದನ್ನು ಊಹಿಸಿರಲಿಲ್ಲ. ಕಾಲೇಜು ಕ್ಯಾಂಪಸ್‌ನಲ್ಲಿ, ಅದೂ ಹಾಡಹಗಲೇ ಇಂತಹ ಘಟನೆ ಹುಬ್ಬಳ್ಳಿಯಲ್ಲಿ ಈ ಹಿಂದೆ ಎಂದೂ ನಡೆದಿರಲಿಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ. ಗದಗ್​ನಲ್ಲಿ ನಿನ್ನೆ ಮರ್ಡರ್ ಆಗಿದೆ. ಬೆಂಗಳೂರಿನಲ್ಲಿಯೂ ನಿನ್ನೆ ಮಾಸ್ ಮರ್ಡರ್ ಆಗಿದೆ. ಹಲವಾರು ತಿಂಗಳಿನಿಂದ ಇಂಥ ಘಟನೆಗಳು ನಡೆಯುತ್ತಿವೆ. ರೌಡಿಗಳಿಗೆ ಪೊಲೀಸರ ಹೆದರಿಕೆ ಇಲ್ಲದಂತಾಗಿದೆ ಎಂದರು.

ಈ ಪ್ರಕರಣದಲ್ಲಿ ಆ ಮಗುವಿನ ತಪ್ಪಿಲ್ಲ, ತಮ್ಮ ಮಕ್ಕಳು ಎಷ್ಟು ಸುರಕ್ಷತವಾಗಿದ್ದಾರೆ ಎಂಬ ಆತಂಕ ಈಗ ಪಾಲಕರಿಗೆ ಕಾಡುತ್ತಿದೆ. ಸಿಎಂ ಒಂದು ಟ್ವೀಟ್ ಮಾಡಿದರೆ ಮಾತ್ರಕ್ಕೆ ಜವಾಬ್ದಾರಿ ಮುಗಿದಂತಲ್ಲ. ಈ ಪ್ರಕರಣ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಿಬೇಕು. ಆದರೆ ಇಲ್ಲಿಯ ಪೊಲೀಸರಿಂದ ಅದು ಆಗೋದಿಲ್ಲ. ಇದಕ್ಕಾಗಿ ಒಂದು ಎಸ್​ಐಟಿ ತಂಡ ರಚನೆ ಮಾಡಬೇಕು. ಈ ಪ್ರಕರಣದ ತನಿಖೆಯನ್ನು ಸ್ಥಳೀಯ ಪೊಲೀಸರಿಗೆ ನೀಡಬಾರದು ಎಂದು ಒತ್ತಾಯಿಸಿದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments