ನೇಹಾ ಪರ್ವಾಗಿ ನಿಂತ ಧ್ರುವ ಸರ್ಜಾ

ಹುಬ್ಬಳ್ಳಿ ನಗರ ಅಕ್ಷರಶಃ ಬೆಚ್ಚಿ ಬಿದ್ದಿದೆ. ಮೊನ್ನೆ ಬಿವಿಬಿ ಕ್ಯಾಂಪಸ್ನಲ್ಲಿ ನಡೆದ ವಿದ್ಯಾರ್ಥಿನಿಯ ಕೊಲೆ ಪ್ರಕರಣ ಅವಳಿ ನಗರದ ಜನತೆಯ ನಿದ್ದೆಗೆಡಿಸಿದೆ. ಅಲ್ಲದೆ, ಪ್ರೀತಿ ಮಾಡಲ್ಲ ಎಂದ ಯುವತಿಗೆ ಚಾಕುವಿನಿಂದ ಇರಿದು ಕೊಂದ ಕ್ರೂರಿಗೆ ತಕ್ಕ ಶಿಕ್ಷೆಯಾಗಬೇಕು ಎಂಬ ಮಾತು ಸೋಷಿಯಲ್ ಮೀಡಿಯಾದಲ್ಲಿ ಕೇಳಿ ಬರುತ್ತಿದೆ.
ಇದೀಗ, ನಟ ಧ್ರುವ ಸರ್ಜಾ ನೇಹಾ ಸಾವಿಗೆ ನ್ಯಾಯ ದೊರಕಿಸಿ ಕೊಡುವಂತೆ ಒತ್ತಾಯ ಮಾಡಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ನಟ, ಸಹೋದರಿ ನೇಹಾ ಹಿರೇಮಠ್ ರ ಹತ್ಯೆ ಅತ್ಯಂತ ಹೀನ ಕೃತ್ಯ.ಕ್ಯಾಂಪಸ್ನಲಿ ಹತ್ಯೆ ನಿಜಕ್ಕೂ ಆತಂಕ ಮೂಡಿಸುತ್ತದೆ.
ಸರ್ಕಾರ ಶೀಘ್ರದಲ್ಲೇ ತ್ವರಿತಗತಿ ನ್ಯಾಯಾಲಯದಲ್ಲಿ ಈ ಕೇಸ್ ತೀರ್ಪು ಬರಲು ವರ್ಗಾಯಿಸಬೇಕು. ಹಾಗು ಇದನ್ನ ಎಲ್ಲಾ ಆಯಮದಲ್ಲೂ ತನಿಖೆ ನಡೆಸಿ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡುವಂತಾಗಬೇಕು. ಜೈ ಆಂಜನೇಯ . ಎಂದು ಟ್ವಿಟ್ ಮಾಡಿದ್ದಾರೆ.
https://twitter.com/DhruvaSarja/status/1781327453060800851?ref_src=twsrc%5Etfw%7Ctwcamp%5Etweetembed%7Ctwterm%5E1781327453060800851%7Ctwgr%5Ed68cc0c5283fe523eb844b40b7be79ef96d40951%7Ctwcon%5Es1_&ref_url=https%3A%2F%2Fzeenews.india.com%2Fkannada%2Fentertainment%2Fdhruva-sarja-reaction-on-neha-hiremath-death-in-hubli-205238




