Tuesday, June 24, 2025
25.9 C
Bengaluru
Google search engine
LIVE
ಮನೆಸುದ್ದಿಮಗಳ ಹತ್ಯೆ ತನಿಖೆ ದಾರಿ ತಪ್ಪಿಸುವ ಕೆಲಸ ಆಡಳಿತ ಪಕ್ಷದವರಿಂದಲೇ ನಡೆಯುತ್ತಿದೆ- ನಿರಂಜನ ಹಿರೇಮಠ.

ಮಗಳ ಹತ್ಯೆ ತನಿಖೆ ದಾರಿ ತಪ್ಪಿಸುವ ಕೆಲಸ ಆಡಳಿತ ಪಕ್ಷದವರಿಂದಲೇ ನಡೆಯುತ್ತಿದೆ- ನಿರಂಜನ ಹಿರೇಮಠ.

ಹುಬ್ಬಳ್ಳಿ: ನನ್ನ ಮಗಳು ನೇಹಾಳ ಹತ್ಯೆ ಪ್ರಕರಣದ ತನಿಖೆಯ ದಾರಿ ತಪ್ಪಿಸುವ ಕೆಲಸ ಆಡಳಿತ ಪಕ್ಷದವರಿಂದಲೇ ನಡೆಯುತ್ತಿದೆ ಎಂದು ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನಯ್ಯ ಹಿರೇಮಠ ಗಂಭೀರವಾಗಿ ಆರೋಪಿಸಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆ ನಡೆದ ಮೊದಲ ದಿನ ನನ್ನ ಜೊತೆಗೆ ಇದ್ದವರು, ಇಂದು ನನ್ನ ಬೆನ್ನಿಗೆ ನಿಂತಿಲ್ಲ, ಘಟನೆ ವೈಯಕ್ತಿಕ ಎಂದು ಹೇಳಿಕೆ ನೀಡಿದ್ದ ಗೃಹ ಸಚಿವ ಜಿ.ಪರಮೇಶ್ವರ ಅವರು ಇಂದು ವಿಷಾದ ವ್ಯಕ್ತಪಡಿಸಿದ್ದಾರೆ.

ಆಡಳಿತ ಪಕ್ಷದಲ್ಲಿ ಇದ್ದವರೇ ಪೋಲಿಸ್ ಆಯುಕ್ತೆ ರೇಣುಕಾ ಸುಕುಮಾರ ಮೂಲಕ ತನಿಖೆಯ ದಾರಿ ತಪ್ಪಿಸುವ ಪ್ರಯತ್ನ ನಡೆಸಿದ್ದಾರೆ ಎಂದರು.

ನೇಹಾ ಹತ್ಯೆಯಲ್ಲಿ ಫಯಾಜ್ ಒಬ್ಬನೇ ಇಲ್ಲ, ಈತನ ಹಿಂದೆ ನಾಲ್ಕು ಜನರಿದ್ದಾರೆ. ಅವರ ಹೆಸರನ್ನು ಪೋಲಿಸರಿಗೆ ಕೊಟ್ಟಿದ್ದೇನೆ. ಪೋಲಿಸರು ಈ ಕುರಿತು ತನಿಖೆ ಆಗಬೇಕು ಎಂದು ಒತ್ತಾಯಿಸಿದರು. ಜತೆಗೆ ಇನ್ಟಾಗ್ರಾಂನಲ್ಲಿ ನನ್ನ ಮಗಳ ಹೆಸರಿನಲ್ಲಿ ನಕಲಿ ಖಾತೆಯನ್ನು ಸೃಷ್ಟಿಸಿ ನನ್ನ ಮಗಳ ಬಗ್ಗೆ ಸಮಾಜದಲ್ಲಿ ತಪ್ಪು ತಿಳುವಳಿಕೆ ಬರುವಂತೆ ಮಾಡಿದ್ದಾರೆ.

ಆರೋಪಿ ಜೈಲಿನಲ್ಲಿದ್ದರು ಖಾತೆಯನ್ನು ಯಾರು ಸೃಷ್ಟಿ ಮಾಡಿದ್ದಾರೆ ಎಂದು ಪೋಲಿಸರು ತನಿಖೆ ನಡೆಸಬೇಕು. ಈ ಕುರಿತು ವಕೀಲರೊಂದಿಗೆ ಮಾತನಾಡಿದ್ದೇನೆ.‌ ಸೈಬರ್ ಪೋಲಿಸರಿಗೆ ಈ ಬಗ್ಗೆ ದೂರು ನೀಡಲಿದ್ದೇನೆ. ಹಿಂದೆ ಆರೋಪಿ ಫಯಾಸ್ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ತನ್ನ ತಂದೆಯನ್ನೇ ಪೋಲಿಸ್ ಠಾಣೆಯಲ್ಲಿ ಕೊಲೆ ಮಾಡಲು ಹೋಗಿದ್ದ, ಇದನ್ನು ಸಮಾಜದ ಮುಖಂಡರು ನನಗೆ ತಿಳಿಸಿದ್ದಾರೆ.

ಪೋಲಿಸರು ಮುಚ್ಚಳಿಕೆ ಬರೆಸಿಕೊಂಡು ಕಳಿಸಿದ್ದಾರೆ. ಈ ವಿಷಯ ನನ್ನ ಗಮನಕ್ಕೆ ಬಂದಿದ್ದರೇ ನನ್ನ ಮಗಳ ರಕ್ಷಣೆಯನ್ನು ನಾನು ಮಾಡಿಕೊಳ್ಳುತ್ತಿದ್ದೆ, ಮಗಳು ಇಂದು ಬದುಕುಳಿಯುತ್ತಿದ್ದಳು ಎಂದು ಕಣ್ಣೀರು ಹಾಕಿದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments