Tuesday, June 24, 2025
27.5 C
Bengaluru
Google search engine
LIVE
ಮನೆಫ್ರೀಡಂ ಟಿವಿ ವಿಶೇಷಎಸ್ಎಸ್ಎಲ್ಸಿ ಮತ್ತು ಪಿಯುಸಿ ಪಾಸಾದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪಾಸಾದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

ಬೆಂಗಳೂರು: ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕ ಪಡೆದು ತೇರ್ಗಡೆಯಾದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಅರ್ಜಿ ಆಹ್ವಾನಿಸಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ .

ಜಿಲ್ಲಾ ಸಂಘಗಳಿಂದ ಆಹ್ವಾನಿಸಿದ ಅರ್ಜಿಗಳಲ್ಲಿ ಶೇ.90 ಅಂಕಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಅರ್ಜಿಗಳನ್ನು ಮಾತ್ರ ರಾಜ್ಯ ಸಂಘಕ್ಕೆ ಕಳುಹಿಸಿಕೊಡಬೇಕು.

ಸಂಘದ ಸದಸ್ಯರ ಮಕ್ಕಳಾಗಿದ್ದು ಉತ್ತಮ ಸಾಧನೆ ಮಾಡಿದ್ದರೆ (ಶೇ.60ಕ್ಕಿಂತ ಹೆಚ್ಚು 90ಕ್ಕಿಂತ ಕಡಿಮೆ) ಸಂಬಂದಿಸಿದ ಆಯಾ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ತಾಲೂಕು ಮತ್ತು ಜಿಲ್ಲಾ ಸಂಘಗಳು ಏರ್ಪಡಿಸಲಿವೆ.

ಕೆಯುಡಬ್ಲ್ಯೂಜೆ ಸದಸ್ಯತ್ವದ ಗುರುತಿನ ಪತ್ರದ‌ (ಸದಸ್ಯರ ಮಕ್ಕಳಾಗಿರಬೇಕು) ಜೆರಾಕ್ಸ್ ಪ್ರತಿ, ವಿದ್ಯಾರ್ಥಿಯ ಆಧಾರ್ ಪ್ರತಿ, ಮಾರ್ಕ್ಸ್ ಕಾರ್ಡ್ ಪ್ರತಿ ಸಹಿತ ಪೂರ್ಣ ಮಾಹಿತಿ (ಎಲ್ಲ ಜೆರಾಕ್ಸ್ ಪ್ರತಿ ಲಗತ್ತಿಸುವುದು ಕಡ್ಡಾಯ)ಜೊತೆಗೆ ತುಂಬಿದ ಅರ್ಜಿಯನ್ನು (ನಿಗದಿತ ಫಾರಂ) ಆಯಾ ಜಿಲ್ಲಾ ಸಂಘದ ದೃಢೀಕರಣ ಸಹಿತ ರಾಜ್ಯ ಸಂಘಕ್ಕೆ ಕಳುಹಿಸಿಕೊಡಲು ಕೋರಿದೆ.

ವಿಳಾಸ:
ಅಧ್ಯಕ್ಷರು/ಪ್ರಧಾನಕಾರ್ಯದರ್ಶಿ
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ, 3ನೇ ಮಹಡಿ, ಕಂದಾಯ ಭವನ, ಕೆ.ಜಿ.ರಸ್ತೆ, ಬೆಂಗಳೂರು-9
ಇಲ್ಲಿಗೆ ಕಳುಹಿಸಿಕೊಡಲು ಕೋರಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments