Sunday, December 7, 2025
18.9 C
Bengaluru
Google search engine
LIVE
ಮನೆ#Exclusive NewsTop Newsಇಂದಿನಿಂದ ಅನ್ನಭಾಗ್ಯ ಅಕ್ಕಿ ಸಾಗಾಟ ಲಾರಿ ಬಂದ್​.. ಲಾರಿ ಮಾಲೀಕರ ಮುಷ್ಕರ

ಇಂದಿನಿಂದ ಅನ್ನಭಾಗ್ಯ ಅಕ್ಕಿ ಸಾಗಾಟ ಲಾರಿ ಬಂದ್​.. ಲಾರಿ ಮಾಲೀಕರ ಮುಷ್ಕರ

ಬೆಂಗಳೂರು: ಕರ್ನಾಟಕದ ಕಾಂಗ್ರೆಸ್​​ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಅನ್ನಭಾಗ ಒಂದಾಗಿದೆ. ಅನ್ನಭಾಗ್ಯ ಯೋಜನೆ ಅಕ್ಕಿ ಮುಂದಿನ ತಿಂಗಳಿನಿಂದ ಬಡವರಿಗೆ ಸಿಗುವುದು ಅನುಮಾನವಾಗಿದೆ. ಯಾಕೆಂದರೆ ಅನ್ಯಭಾಗ್ಯ  ಆಹಾರ ಧಾನ್ಯ ಸಾಗಾಟ ಮಾಡುತ್ತಿದ್ದ ಲಾರಿಗಳನ್ನು ಬಂದ್​ ಮಾಡಲಾಗಿದೆ. ಆಹಾರ ಧಾನ್ಯ ಸಾಗಾಣಿಕೆ ವೆಚ್ಚವನ್ನು ಸರ್ಕಾರ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆ ಲಾರಿ ಮಾಲೀಕರು ಮುಷ್ಕರ ಆರಂಭಿಸಿದ್ದಾರೆ.

ಲಾರಿ ಮಾಲೀಕರ ಪ್ರಕಾರ ಫೆ.2025ರಿಂದ ಸರ್ಕಾರ ಬಾಡಿಗೆ ಹಣವನ್ನು ಪಾವತಿಸುತ್ತಿಲ್ಲ. ಸುಮಾರು 260 ಕೋಟಿ ಹಣ ಬಾಕಿ ಉಳಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ. ಇನ್ನು ಈ ಬಗ್ಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗ ಅಕ್ಕಿ ಸಾಗಾಟವನ್ನು ಬಂದ್​ ಮಾಡಲು ನಿರ್ಧರಿಸಲಾಗಿದೆ. ಸರ್ಕಾರ ಬಾಕಿ ಹಣ ಬಿಡುಗಡೆ ಮಾಡುವರಿಗೂ ಅಕ್ಕಿ ಪೂರೈಕೆ ಬಂದ್ ಮಾಡುತ್ತೇವೆ ಎಂದು ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಹೇಳಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments