Thursday, November 20, 2025
19.1 C
Bengaluru
Google search engine
LIVE
ಮನೆ#Exclusive NewsTop Newsಅಮರ ಪ್ರೇಮ ಕಥೆ; ಪತ್ನಿಯ ಸಾವಿನಲ್ಲೂ ಪಾಲು ಹಂಚಿಕೊಂಡ ಪತಿ- ಒಂದೇ ಚಿತೆಯಲ್ಲಿ ಇಬ್ಬರ ಅಂತ್ಯಕ್ರಿಯೆ

ಅಮರ ಪ್ರೇಮ ಕಥೆ; ಪತ್ನಿಯ ಸಾವಿನಲ್ಲೂ ಪಾಲು ಹಂಚಿಕೊಂಡ ಪತಿ- ಒಂದೇ ಚಿತೆಯಲ್ಲಿ ಇಬ್ಬರ ಅಂತ್ಯಕ್ರಿಯೆ

ಗಾಜಿಪುರ: ಉತ್ತರ ಪ್ರದೇಶದ ಗಾಜಿಪುರದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿನ ರಾಂಪುರ ಗ್ರಾಮದಲ್ಲಿ ಪತ್ನಿಯ ಸಾವಿನ ಆಘಾತ ತಾಳಲಾರದೆ ಪತಿ ಕೂಡ ಕೆಲವೇ ಗಂಟೆಗಳ ಅಂತರದಲ್ಲಿ ನಿಧನರಾಗಿದ್ದಾರೆ. ಇದಾದ ಬಳಿಕ ಇಬ್ಬರ ಮೃತದೇಹಗಳನ್ನು ಒಟ್ಟಿಗೇ ಮೆರವಣಿಗೆ ಮಾಡಿ, ಒಂದೇ ಚಿತೆಯಲ್ಲಿಟ್ಟು ಅಂತ್ಯಕ್ರಿಯೆ ನೆರವೇರಿಸಲಾಯಿತು. ಈ ಕ್ಷಣಕ್ಕೆ ಇಡೀ ಗ್ರಾಮಸ್ಥರು ಸಾಕ್ಷಿಯಾದರು.

ಈ ಗ್ರಾಮದ ಮುಂಭಾಗದ ಗಂಗಾನದಿಯ ದಡದಲ್ಲಿ ಅಲಂಕೃತವಾದ ಒಂದೇ ಚಿತೆಯಲ್ಲಿ ಪತಿ-ಪತ್ನಿ ಇಬ್ಬರ ಅಂತ್ಯಕ್ರಿಯೆಯನ್ನೂ ನೆರವೇರಿಸಲಾಯಿತು. ಸುಮಾರು 87 ವರ್ಷ ವಯಸ್ಸಿನ ಕಾಮೇಶ್ವರ ಉಪಾಧ್ಯಾಯ, ಕಂದಾಯ ಇಲಾಖೆಯಲ್ಲಿ ಅಕೌಂಟೆಂಟ್ ಹುದ್ದೆಯಿಂದ ನಿವೃತ್ತಿ ಹೊಂದಿದ್ದು, ಅವರ ಪತ್ನಿ ಸುಮಾರು 85 ವರ್ಷ ವಯಸ್ಸಿನ ಚಂಪಾ ಉಪಾಧ್ಯಾಯ ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇಬ್ಬರೂ ವಾರಣಾಸಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯದಲ್ಲಿ ಸ್ವಲ್ಪ ಸುಧಾರಣೆ ಕಂಡುಬಂದ ನಂತರ ಕುಟುಂಬಸ್ಥರು ಅವರನ್ನು ಮನೆಗೆ ಕರೆತಂದಿದ್ದರು.

ಆದರೆ, ತಡರಾತ್ರಿ ಪತ್ನಿ ಚಂಪಾ ಸಾವನ್ನಪ್ಪಿದ್ದಾರೆ. ಪತ್ನಿಯ ಸಾವಿನ ಸುದ್ದಿ ತಿಳಿದ ಪತಿಗೆ ಆಘಾತ ತಡೆದುಕೊಳ್ಳಲಾಗಲಿಲ್ಲ. ಅದಾದ ಕೆಲವು ಗಂಟೆಗಳ ನಂತರ ಅವರೂ ಕೊನೆಯುಸಿರೆಳೆದಿದ್ದಾರೆ. ಪತಿ-ಪತ್ನಿಯರ ಶವಯಾತ್ರೆಯನ್ನು ಒಟ್ಟಿಗೆ ಮಾಡಲಾಗಿದ್ದು, ಈ ಘಟನೆಯ ಸುದ್ದಿ ಕೇಳಿ ಎಲ್ಲರೂ ಬೆಚ್ಚಿಬಿದ್ದರು. ಅಕ್ಕಪಕ್ಕದ ಜನರು ಜಮಾಯಿಸಿ ಕುಟುಂಬಕ್ಕೆ ಸಾಂತ್ವನ ಹೇಳಿದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments