Tuesday, June 24, 2025
25.9 C
Bengaluru
Google search engine
LIVE
ಮನೆ#Exclusive NewsTop Newsಮಕ್ಕಳ ಕೈಯಲ್ಲಿ ಪೆನ್ನು ಬದಲು ತಲ್ವಾರ್ ಕೊಡಿ – ಪ್ರಚೋದನಾಕಾರಿ ಹೇಳಿಕೆಗೆ ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ...

ಮಕ್ಕಳ ಕೈಯಲ್ಲಿ ಪೆನ್ನು ಬದಲು ತಲ್ವಾರ್ ಕೊಡಿ – ಪ್ರಚೋದನಾಕಾರಿ ಹೇಳಿಕೆಗೆ ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ ವಿರುದ್ಧ ಎಫ್‌ಐಆರ್

ಮಕ್ಕಳ ಕೈಯಲ್ಲಿ ಪೆನ್ನು ಬದಲು ತಲ್ವಾರ್ ಕೊಡಿ ಎಂದು ವಕ್ಫ್ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ರಾಜ್ಯಾದ್ಯಂತ ವಕ್ಫ್ ನೋಟಿಸ್ ವಿವಾದ ಬುಗಿಲೆದ್ದಿತ್ತು. ಪರಿಣಾಮ ಜಿಲ್ಲೆಯಲ್ಲಿ ವಕ್ಫ್ ಹಠಾವೋ ದೇಶ ಬಚಾವೋ ಎಂದು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆಯಲ್ಲಿ ಪೊಲೀಸರ ಮುಂದೆಯೇ, ‘ಜೀವ ಕೊಡುವುದಕ್ಕೂ, ಜೀವ ತೆಗೆಯುವುದಕ್ಕೂ ಸಿದ್ಧರಿದ್ದೀವಿ ಹುಷಾರ್.. ಯುವಕರ ಮನೆಯಲ್ಲಿ ತಲ್ವಾರ್ ಇವೆ. ಎಲ್ಲರ ಮನೆಯಲ್ಲಿ ಎಲ್ಲ ಇದೆ. ಯಾರ್ ಬರುತ್ತಾರೆ ಅವರನ್ನು ತಲ್ವಾರ್‌ನಿಂದ ಕಡಿಯುತ್ತೇವೆ. ಇನ್ಮುಂದೆ ನಾವು ಮಕ್ಕಳ ಕೈಯಲ್ಲಿ ಪೆನ್ನು ಕೊಡುವುದರ ಬದಲು ತಲ್ವಾರ್ ಕೊಡೋಣ’ ಎಂದು ಸ್ವಾಮೀಜಿ ಹೇಳಿಕೆ ನೀಡಿದ್ದರು.

ಸ್ವಾಮೀಜಿಯ ಹೇಳಿಕೆಯ ಆಧಾರದ ಮೇಲೆ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಾಗಿದೆ. ಭಾರತೀಯ ನ್ಯಾಯ ಸಂಹಿತೆ ಕಾಯಿದೆ 299, 353/2 ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಯಾವುದೇ ವರ್ಗದ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ಆಕ್ರೋಶಗೊಳಿಸುವ ಉದ್ದೇಶವಿಟ್ಟುಕೊಂಡಿದ್ದಾರೆ ಎಂದು ಎಫ್‌ಐಆರ್ ದಾಖಲಾಗಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments