ರಾಜ್ಯಸುದ್ದಿ

ರಾಯಚೂರಿನಲ್ಲಿ ಸರ್ಕಾರಿ ಬಸ್ ಪಲ್ಟಿ – ಪ್ರಯಾಣಿಕನ ಕಾಲು ಮುರಿತ, 15 ಮಂದಿಗೆ ಗಾಯ

ರಾಯಚೂರು: ಚಾಲಕನ ನಿಯಂತ್ರಣ ತಪ್ಪಿ ರಾಯಚೂರು ಹೊರವಲಯದ ಸಾಥಮೈಲ್​​ ಕ್ರಾಸ್​ ಬಳಿ ಕೆಎಸ್​​ ಆರ್​​ ಟಿಸಿ ಸ್ಲೀಪರ್​​ ಬಸ್​ ಪಲ್ಟಿಯಾಗಿಗಿದೆ. ಪರಿಣಾಮ ಓರ್ವ ಪ್ರಯಾಣಿಕನ ಕಾಲು ಮುರಿದಿದ್ದು, ಬಸ್​​ ನಲ್ಲಿದ್ದ 15 ಜನ ಪ್ರಯಾಣಿಕರಿಗೆ ಗಾಯಗಳಾಗಿವೆ.

ಅಪಘಾತದಲ್ಲಿ ಪ್ರಯಾಣಿಕ ವಿಶ್ವನಾಥ್​ ಎಂಬುವವರ ಕಾಲು ಮುರಿದಿದ್ದು, ರಿಮ್ಸ್ ಆಸ್ಪತ್ರೆಗೆ ಅವರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ದಾವಣಗೆರೆ ಕಡೆಯಿಂದ ರಾಯಚೂರಿನತ್ತ ಬರುತ್ತಿದ್ದ ಸ್ಲೀಪರ್​ ಬಸ್​ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಸ್ಥಳಕ್ಕೆ ರಾಯಚೂರು ಗ್ರಾಮೀಣ ಪೊಲೀಸರು ಭೇಟಿ ನೀಡಿ, ರಕ್ಷಣಾ ಕಾರ್ಯ ನಡೆಸಲಾಗಿದೆ.

Comments (0)

Your email address will not be published. Required fields are marked *

Back to top button