Tuesday, February 10, 2026
16.6 C
Bengaluru
Google search engine
LIVE
ಮನೆಕ್ರೈಂ ಸ್ಟೋರಿಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು.. ಎದೆಗೆ ಗುಂಡಿಟ್ಟು ಗ್ರಾಮ ಪಂ. ಅಧ್ಯಕ್ಷನ ಹತ್ಯೆ

ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು.. ಎದೆಗೆ ಗುಂಡಿಟ್ಟು ಗ್ರಾಮ ಪಂ. ಅಧ್ಯಕ್ಷನ ಹತ್ಯೆ

ಭೀಮಾತೀರದಲ್ಲಿ ಗುಂಡಿನ ಸದ್ದಿಗೆ ನೆತ್ತರು ಹರಿದಿದೆ.. ಎದೆಗೆ ಗುಂಡಿಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷನನ್ನು ಕೊಲೆ ಮಾಡಿರುವ ಘಟನೆ ಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ನಡೆದಿದೆ..

ಭೀಮನಗೌಡ ಬಿರಾದಾರ ಎಂಬವರ ಮೇಲೆ ಗುಂಡಿನ ದಾಳಿ ನಡೆದಿದ್ದು, ತಲವಾರದಿಂದ ಹಲ್ಲೆ ಮಾಡಿ ಹತ್ಯೆ ಮಾಡಲಾಗಿದೆ. ಕಟಿಂಗ್ ಅಂಗಡಿಯಲ್ಲಿ ಚೇರ್ ಮೇಲೆ ಕುಳಿತ್ತಿದ್ದ ವೇಳೆ ಗುಂಡಿನ ದಾಳಿ ಮಾಡಿ ಹತ್ಯೆ ಮಾಡಲಾಗಿದೆ.

ಗುಂಡಿನ ದಾಳಿಯ ಜೊತೆಗೆ ತಲವಾರದಿಂದ ಹಲ್ಲೆ ಮಾಡಲಾಗಿದ್ದು, ಭೀಮನಗೌಡ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ಘಟನೆಯು ಗ್ರಾಮದಲ್ಲಿ ಆತಂಕದ ವಾತಾವರಣವನ್ನು ಸೃಷ್ಟಿಸಿದ್ದು, ಮೃತದೇಹವನ್ನು ಸಂಬಂಧಿಕರು ವಿಜಯಪುರದ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಭೀಮನಗೌಡ ಬಿರಾದಾರ, ಭೀಮಾತೀರದ ಮಹಾದೇವ ಸಾಹುಕಾರ್ ಬೈರಗೊಂಡ ಅವರ ಪರಮಾಪ್ತರಾಗಿದ್ದರು ಎನ್ನಲಾಗಿದ್ದು, ಘಟನಾ ಸ್ಥಳಕ್ಕೆ ಚಡಚಣ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments