Tuesday, June 24, 2025
27.5 C
Bengaluru
Google search engine
LIVE
ಮನೆರಾಜಕೀಯಮುಂದುವರಿದ ರೇವಣ್ಣ ಟೆಂಪಲ್ ರನ್ - ಇಂದು ಗಾಣಗಾಪುರದ ದತ್ತಾತ್ರೇಯ ಪೀಠಕ್ಕೆ ಭೇಟಿ

ಮುಂದುವರಿದ ರೇವಣ್ಣ ಟೆಂಪಲ್ ರನ್ – ಇಂದು ಗಾಣಗಾಪುರದ ದತ್ತಾತ್ರೇಯ ಪೀಠಕ್ಕೆ ಭೇಟಿ

ಬೆಂಗಳೂರು: ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ಟೆಂಪಲ್ ರನ್ ಮುಂದುವರಿದಿದೆ. ಮೇ 23ರಂದು ಅವರು ಬೆಂಗಳೂರಿನಿಂದ ಕಲಬುರಗಿಗೆ ವಿಶೇಷ ವಿಮಾನದಲ್ಲಿ ಕಲಬುರಗಿಗೆ ಪ್ರಯಾಣ ಬೆಳೆಸಿದ್ದಾರೆ. ಅಲ್ಲಿಂದ ಅವರು, ಮಹಾರಾಷ್ಟ್ರದ ಗಾಣಿಗಾಪುರದಲ್ಲಿರುವ ದತ್ತಾತ್ರೇಯ ಪೀಠಕ್ಕೆ ತೆರಳಿ ದತ್ತಾತ್ರೇಯ ದೇವರ ದರ್ಶನ ಮಾಡಲಿದ್ದಾರೆಂದು ಮೂಲಗಳು ತಿಳಿಸಿವೆ.

ಮಹಿಳೆಯೊಬ್ಬರನ್ನು ಅಪಹರಣ ಮಾಡಿದ ಆರೋಪದಡಿ ದಾಖಲಾಗಿದ್ದ ಪ್ರಕರಣದಲ್ಲಿ ಎಚ್ ಡಿ ರೇವಣ್ಣ ಅವರು ಇತ್ತೀಚೆಗೆ ಬಂಧಿಸಲಾಗಿತ್ತು. ಮೇ 4ರಂದು ಬಂಧನಕ್ಕೊಳಗಾಗಿದ್ದ ಮೇ 13ರಂದು ಅವರಿಗೆ ಜಾಮೀನು ಸಿಕ್ಕಿತ್ತು. ಜಾಮೀನು ಸಿಕ್ಕ ಕೂಡಲೇ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ಹೋಗಿದ್ದ ಅವರು, ಆನಂತರ ಅಲ್ಲಿಂದ ಬೆಂಗಳೂರಿನ ಜೆಪಿ ನಗರ, ಚಾಮರಾಜಪೇಟೆ, ಜಯನಗರ ಮುಂತಾದ ಕಡೆ ಹಲವಾರು ದೇವಸ್ಥಾನಗಳಿಗೆ ಭೇಟಿ ನೀಡಿದ್ದರು.

ತದನಂತರ, ಮೇ 13ರ ರಾತ್ರಿಯೇ ಮೈಸೂರಿಗೆ ತೆರಳಿದ್ದ ಅವರು, ಅಲ್ಲಿ ಚಾಮುಂಡಿಬೆಟ್ಟಕ್ಕೆ ವಿಶೇಷ ಪೂಜೆ ಸಲ್ಲಿಸಿದ್ದರು. ಆನಂತರದಲ್ಲಿ, ಆದಿಚುಂಚನಗಿರಿ ಮಠಕ್ಕೆ, ಅಲ್ಲಿಂದ ಶೃಂಗೇರಿಗೆ ತೆರಳಿ ದೇವರ ದರ್ಶನ ಮಾಡಿದ್ದರು. ಇದಾಗಿ ಕೆಲವು ದಿನಗಳ ನಂತರ, ಮತ್ತೊಂದು ಲೈಂಗಿಕ ಕಿರುಕುಳದ ಪ್ರಕರಣದಲ್ಲಿಯೂ ಅವರಿಗೆ ಜಾಮೀನು ಸಿಕ್ಕಿತ್ತು. ಮೊದಲು ಒಂದು ದಿನದ ಜಾಮೀನು ನೀಡಿದ್ದ ನ್ಯಾಯಾಲಯ, ಆನಂತರ ಮೇ 20ರವರೆಗೆ ಆ ಜಾಮೀನನ್ನು ಮುಂದುವರಿಸಿತು.

ಡ್ರೈವರ್ ಅಜಿತ್ ಗೆ ಮತ್ತೊಂದು ಸಮನ್ಸ್

ಎಚ್ ಡಿ ರೇವಣ್ಣನವರ ಮೇಲಿರುವ ಮಹಿಳೆಯ ಕಿಡ್ನ್ಯಾಪ್ ಕೇಸ್ ನಲ್ಲಿ ಭಾಗಿಯಾಗಿದ್ದಾರೆಂಬ ಆರೋಪ ಹೊತ್ತಿರುವ, ಎಚ್ ಡಿ ರೇವಣ್ಣನವರ ಪತ್ನಿ ಭವಾನಿ ರೇವಣ್ಣ ಅವರ ಕಾರು ಚಾಲಕ ಅಜಿತ್ ಎಂಬುವರಿಗೆ ಪೊಲೀಸರು ಎರಡನೇ ಸಮನ್ಸ್ ಜಾರಿಗೊಳಿಸಿದ್ದಾರೆ. ಪ್ರಕರಣ ಬೆಳಕಿಗೆ ಬಂದಾಗಿನಿಂದ ಅಜಿತ್ ತಲೆಮರೆಸಿಕೊಂಡಿದ್ದಾನೆ. ಆತನನ್ನು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಈ ಹಿಂದೆ ಪೊಲೀಸರು ಸಮನ್ಸ್ ಜಾರಿ ಮಾಡಿದ್ದರು. ಆದರೆ, ಆತ ವಿಚಾರಣೆಗೆ ಹಾಜರಾಗಿರಿಲ್ಲ.

ಆ ಹಿನ್ನೆಲೆಯಲ್ಲಿ, ಮೇ 22ರಂದು ಆತನಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಎರಡನೇ ಸಮನ್ಸ್ ಜಾರಿಗೊಳಿಸಲಾಗಿದೆ. ಹೊಳೆನರಸೀಪುರದಲ್ಲಿರುವ ಆತನ ಮನೆಗೆ ತೆರಳಿದ್ದ ಇಬ್ಬರು ಪೇದೆಗಳು, ಆತನ ಮನೆಗೆ ಈ ಸಮನ್ಸ್ ನೀಡಿ ಬಂದಿದ್ದಾರೆ.

 

ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments