Tuesday, January 27, 2026
26.9 C
Bengaluru
Google search engine
LIVE
ಮನೆಕ್ರೈಂ ಸ್ಟೋರಿಕುಡಿದ ಅಮಲಿನಲ್ಲಿ ಗೆಳೆಯನನ್ನೇ ಕೊಂದುಬಿಟ್ಟ..!

ಕುಡಿದ ಅಮಲಿನಲ್ಲಿ ಗೆಳೆಯನನ್ನೇ ಕೊಂದುಬಿಟ್ಟ..!

ಕೋಲಾರ: ಕುಡಿದ ಅಮಲಿನಲ್ಲಿ ಗೆಳೆಯರ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ, ಕೊಲೆಯಲ್ಲಿ ಅಂತ್ಯವಾದ ಘಟನೆ ಕೋಲಾರದಲ್ಲಿ  ನಡೆದಿದೆ.

ಕೋಲಾರ ಜಿಲ್ಲೆ ಮುಳಬಾಗಿಲು ನಗರದ ಹೊರವಲಯದಲ್ಲಿರುವ ಬಾರ್ ಎದುರು ಘಟನೆ ನಡೆದಿದೆ. ಮುಳಬಾಗಿಲು ಹೈದರ್ ನಗರ ನಿವಾಸಿ ಮತೀನ್ (25) ಕೊಲೆಯಾದ ವ್ಯಕ್ತಿ. ಸ್ನೇಹಿತ ಮೊಯಿನ್‌ನಿಂದಲೇ ಮತೀನ್ ಹತ್ಯೆಯಾಗಿದ್ದಾನೆ. ಕುಡಿದ ಮತ್ತಿನಲ್ಲಿ ಇಬ್ಬರ ಮಧ್ಯೆ ಜಗಳ ಪ್ರಾರಂಭವಾಗಿದ್ದು, ಗಲಾಟೆ ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿದೆ.

ಬಾರ್‌ನಲ್ಲಿ ಕುಡಿದ ಬಳಿಕ ಎದುರಿಗೆ ಇದ್ದ ಮರದ ಕೆಳಗೆ ಮತೀನ್ ಹಾಗೂ ಮೊಯಿನ್ ಗಲಾಟೆ ಮಾಡಿಕೊಂಡಿದ್ದಾರೆ. ಈ ವೇಳೆ ಮತೀನ್ ಸ್ನೇಹಿತ ಮೊಯಿನ್‌ನನ್ನು ಅವಾಚ್ಯವಾಗಿ ನಿಂದಿಸಿ ಹಲ್ಲೆ ಮಾಡಿದ್ದಾನೆ. ಈ ವೇಳೆ ಕೋಪಗೊಂಡ ಮೊಯಿನ್ ಕಬ್ಬಿಣದ ರಾಡ್‌ನಿಂದ ಮತೀನ್‌ಗೆ ಇರಿದು ಪರಾರಿಯಾಗಿದ್ದಾನೆ

ಕೊಲೆಯ ದೃಶ್ಯಗಳು ಬಾರ್‌ಗೆ ಅಳವಡಿಸಿದ್ದ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಎಸ್ಪಿ ನಿಖಿಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments