Monday, June 23, 2025
26.6 C
Bengaluru
Google search engine
LIVE
ಮನೆಮನರಂಜನೆಸುಪ್ರೀಂ ಕೋರ್ಟ್​ನಲ್ಲಿ ನಟ ದರ್ಶನ್​ ಅರ್ಜಿ ವಿಚಾರಣೆ.. ಮೇ 14ಕ್ಕೆ ಮುಂದೂಡಿಕೆ..!

ಸುಪ್ರೀಂ ಕೋರ್ಟ್​ನಲ್ಲಿ ನಟ ದರ್ಶನ್​ ಅರ್ಜಿ ವಿಚಾರಣೆ.. ಮೇ 14ಕ್ಕೆ ಮುಂದೂಡಿಕೆ..!

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ 2ನೇ ಪ್ರಮುಖ ಆರೋಪಿ ಆಗಿರುವ ನಟ ದರ್ಶನ್​ ಅವರಿಗೆ ಹೈಕೋರ್ಟ್ ನೀಡಿರುವ ಜಾಮೀನನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್​​ನಲ್ಲಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿತ್ತು. ಅದರ ವಿಚಾರಣೆ ಇಂದು ಆರಂಭ ಆಗಿದೆ. ಸುಪ್ರೀಂ ಕೋರ್ಟ್ ದ್ವಿ ಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿದೆ. ನ್ಯಾ. ಜೆ.ಬಿ. ಪರ್ದಿವಾಲಾ ಹಾಗೂ ನ್ಯಾ ಮಹದೇವನ್ ಅವರಿರುವ ದ್ವಿಸದಸ್ಯ ಪೀಠದಲ್ಲಿ ವಿಚಾರಣೆ  ಮಾಡಲಾಯಿತು.

ರಾಜ್ಯ ಸರ್ಕಾರದ ಪರ ಹಿರಿಯ ವಕೀಲ ಸಿದ್ದಾರ್ಥ್ ಲೂಥ್ರಾ ಅವರು ವಾದ ಮಾಡಿದ್ದಾರೆ. ಎಲ್ಲಾ ಆರೋಪಿಗಳಿಗೂ ಜಾಮೀನು ಸಿಕ್ಕಿದೆಯಾ? ಆರೋಪಿ ದರ್ಶನ್ ಏನು ರಾಜಕಾರಣಿಯಾ ಎಂದು ಜಡ್ಜ್ ಪ್ರಶ್ನೆ ಕೇಳಿದ್ದಾರೆ. ‘ಎಲ್ಲರಿಗೂ ಜಾಮೀನು ಸಿಕ್ಕಿದೆ. ಆರೋಪಿ ದರ್ಶನ್ ರಾಜಕಾರಣಿಯಲ್ಲ, ಜನಪ್ರಿಯ ನಟ’ ಎಂದು ವಕೀಲ ಸಿದ್ದಾರ್ಥ್ ಲೂಥ್ರಾ ಅವರು ಉತ್ತರಿಸಿದ್ದಾರೆ. ಹತ್ಯೆಯ ತೀವ್ರತೆ ಹೇಗಿತ್ತು ಎಂಬುದನ್ನು ಜಡ್ಜ್ ಮುಂದೆ ಸಿದ್ದಾರ್ಥ್ ಲೂಥ್ರಾ ವಿವರಿಸಿದ್ದಾರೆ.

ಎಲೆಕ್ಟ್ರಾನಿಕ್ ಎವಿಡೆನ್ಸ್ ಇದೆ. ಪವಿತ್ರಾ ಗೌಡ ಮಾಡಿರುವ ಮೆಸೇಜ್​ಗಳು ಇವೆ. ಸಿಸಿಟಿವಿ ದೃಶ್ಯಗಳು ಕೂಡ ಸಿಕ್ಕಿವೆ ಎಂದು ಸಿದ್ದಾರ್ಥ್ ಲೂಥ್ರಾ ಹೇಳಿದ್ದಾರೆ. ಪೋಸ್ಟ್ ಮಾರ್ಟಮ್ ವರದಿ ಕೊಡಿ ಎಂದು ಜಡ್ಜ್ ಕೇಳಿದ್ದಾರೆ. ‘ದೇಹವನ್ನು ಪ್ರಾಣಿಗಳು ತಿಂದಿವೆ. ಮೂಳೆಗಳು ಮುರಿದಿವೆ. ರಕ್ತ ಸುರಿದಿದೆ. ಮರ್ಮಾಂಗಕ್ಕೆ ಗಾಯಗಳಾಗಿವೆ. ದೇಹದ ಪ್ರಮುಖ ಭಾಗಗಳಲ್ಲಿ ರಕ್ತ ಹೆಪ್ಪುಗಟ್ಟಿದೆ. ವಿದ್ಯುತ್ ಶಾಕ್ ನೀಡಲಾಗಿದೆ’ ಎಂದು ಹತ್ಯೆಯ ಕ್ರೂರತೆಯನ್ನು ಸರಕಾರದ ಪರ ವಕೀಲ ಸಿದ್ದಾರ್ಥ್ ಲೂಥ್ರಾ ವಿವರಿಸಿದ್ದಾರೆ.

ಆರೋಪಿ ದರ್ಶನ್ ಈಗಲೂ ಸಾಕ್ಷಿಗಳ ಜೊತೆ ಒಡನಾಟ ಹೊಂದಿದ್ದಾರೆ ಎಂದು ಸಿದ್ದಾರ್ಥ್ ಲೂಥ್ರಾ ಹೇಳಿದ್ದಾರೆ. ದರ್ಶನ್​​ಗೆ ಮದುವೆ ಆಗಿದೆಯೇ? ಪವಿತ್ರಾ ಗೌಡ ದರ್ಶನ್ ಪತ್ನಿಯೇ ಎಂದು ಜಡ್ಜ್ ಕೇಳಿದ್ದಾರೆ. ‘ಪವಿತ್ರಾ ಗೌಡ ಪತ್ನಿ ಅಲ್ಲ, ಪರಸ್ತ್ರೀ’ ಎಂದು ಸಿದ್ದಾರ್ಥ್ ಲೂಥ್ರಾ ಮಾಹಿತಿ ತಿಳಿಸಿದ್ದಾರೆ.

ದರ್ಶನ್ ಅವರು ತಮ್ಮ ಪರ ವಾದಕ್ಕೆ ಖ್ಯಾತ ವಕೀಲ ಅಭಿಷೇಕ್ ಮನು ಸಿಂಘ್ವಿ ಮೊರೆ ಹೋಗಿದ್ದಾರೆ. ‘ದರ್ಶನ್ ಹತ್ಯೆ ಮಾಡಿರುವುದಕ್ಕೆ ಸಾಕ್ಷ್ಯಗಳಿಲ್ಲ. ಮೂರು ಸೆಕೆಂಡ್ ವಿಡಿಯೋ ಇದೆ ಎನ್ನುತ್ತಿದ್ದಾರೆ. ಅದರಲ್ಲಿ ಏನು ಗೊತ್ತಾಗುತ್ತೆ? ಅದನ್ನು ಹೇಗೆ ಸಾಕ್ಷ್ಯ ಎಂದು ಪರಿಗಣಿಸಲಾಗುತ್ತೆ? ಪ್ರತ್ಯಕ್ಷದರ್ಶಿಗಳ ಹೇಳಿಕೆಯನ್ನು ಪಡೆಯದೇ ದರ್ಶನ್ ಅವರನ್ನು ಬಂಧಿಸಲಾಗಿದೆ. ಬಂಧಿಸಿದ ಬಳಿಕ ಪ್ರತ್ಯಕ್ಷದರ್ಶಿಗಳ ಹೇಳಿಕೆ ಪಡೆಯಲಾಗಿದೆ’ ಎಂದು ದರ್ಶನ್ ಪರ ವಕೀಲರು ವಾದ ಮಾಡಿದ್ದಾರೆ.

ನಟ ದರ್ಶನ್ ವಿರುದ್ಧ ಸಾಕ್ಷ್ಯಗಳಿಲ್ಲ, ಕೊಲೆ ಮಾಡಿದ್ದಕ್ಕೆ ಆಧಾರಗಳಿಲ್ಲ,ಎಲ್ಲಿ ಕೊಲೆ ಆಗಿದೆ ಎನ್ನುವುದರ ಬಗ್ಗೆಯೇ ಗೊಂದಲಗಳಿವೆ ಎಂದು ದರ್ಶನ್​ ಪರ ವಕೀಲ ಅಭಿಷೇಕ್​ ಮನು ಸಿಂಘ್ವಿ ವಾದ ಮಂಡಿಸಿದ್ದಾರೆ.ಶೆಡ್​ನಲ್ಲಿ ಕೊಲೆ ಆಗಿದೆಯಾ..? ಪಾರ್ಕಿಂಗ್​​ನಲ್ಲಿ ಕೊಲೆ ಆಗಿದೆಯಾ..? 3 ಸೆಕೆಂಡ್​​ಗಳ ವೀಡಿಯೋ ಇದೆ ಎನ್ನುತ್ತಿದ್ದಾರೆ? ನಾನೂ ಕೂಡ ಆ ವೀಡಿಯೋ ನೋಡಿಲ್ಲ ಎಂದು  ನಟ ದರ್ಶನ್ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಾಡಿದ್ದಾರೆ..

ವಾದ ವಿವಾದ ಆಲಿಸಿದ ನ್ಯಾಯಮೂರ್ತಿಗಳು ಮೇ 14 ಕ್ಕೆ  ವಿಚಾರಣೆಯನ್ನು ಮುಂದೂಡಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments