ಕಲಬುರಗಿ: ಉತ್ತರ ಒಳನಾಡಿನಲ್ಲಿ ಮಳೆಯು ಅಬ್ಬರಿಸುತ್ತಿದೆ. ಅದರಲ್ಲೂ ಕಲಬುರಗಿಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಶಾಲಾ -ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಮೂರು ದಿನಗಳಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಕಲಬುರಗಿ ಜಿಲ್ಲಾಡಳಿತ ರಜೆ ಘೋಷಿಸಿದೆ.
ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದ್ದು ಹಲವೆಡೆ ಗ್ರಾಮಗಳಿಗೂ ನೀರು ನುಗ್ಗಿದೆ. ರಸ್ತೆ ಸಂಪರ್ಕ ಸಹ ಹದಗೆಟ್ಟಿದ್ದು ಮಳೆಯ ಅವಾಂತರ ಜನರನ್ನ ಹೈರಾಣಾಗುವಂತೆ ಮಾಡಿದೆ. ಇದೇ ವೇಳೆ ಚಿತ್ತಾಪುರ ಅಫಜಲಪುರ ಜೇವರ್ಗಿ ತಾಲೂಕಿನ ಭೀಮಾ ನದಿ ಉಕ್ಕಿ ಹರಿಯುತಿದ್ದು, ನದಿದಡಕ್ಕೆ ತೆರಳದಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಸೂಚನೆ ರವಾನಿಸಿದೆ.