Wednesday, January 28, 2026
20.2 C
Bengaluru
Google search engine
LIVE
ಮನೆUncategorizedಹೆಬ್ಬಾಳ ವಿಧಾನ ಸಭಾ ಕ್ಷೇತ್ರದಲ್ಲಿ ಜನಸ್ಪಂದನ : ಹರಿದು ಬಂದ ಜನಸಾಗರ

ಹೆಬ್ಬಾಳ ವಿಧಾನ ಸಭಾ ಕ್ಷೇತ್ರದಲ್ಲಿ ಜನಸ್ಪಂದನ : ಹರಿದು ಬಂದ ಜನಸಾಗರ

ಬೆಂಗಳೂರು: ಹೆಬ್ಬಾಳ ವಿಧಾನ ಸಭಾ ಕ್ಷೇತ್ರದ ಶಾಸಕರು ಆದ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಶ್ರೀ ಬಿ.ಎಸ್. ಸುರೇಶ(ಬೈರತಿ) ಅವರ ಅಧ್ಯಕ್ಷತೆಯಲ್ಲಿ ಆರ್.ಟಿ.ನಗರದ ಹೆಚ್.ಎಂ.ಟಿ ಮೈದಾನದಲ್ಲಿ ಹೆಬ್ಬಾಳ ವಿಧಾನ ಸಭಾ ಕ್ಷೇತ್ರದ ಜನಸ್ಪಂದನ ಕಾರ್ಯಕ್ರಮ ಜರುಗಿತು.

ರಾಜ್ಯ ಸರ್ಕಾರದ ಪಂಚ ಖಾತ್ರಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರಲಾಗಿದೆ. ಅದರ ಸದುಪಯೋಗ ಪಡಿಸಿಕೊಳ್ಳಲು ನೆರೆದಿದ್ದ ಜನರಿಗೆ ಸಚಿವರಾದ ಶ್ರೀ ಬೈರತಿ ಸುರೇಶ ಅವರು ಕರೆ ನೀಡಿದರು.

ಅಲ್ಲದೇ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಅಹವಾಲು ಬಂದಾಗ, ಬೇಸಿಗೆ ಮುಗಿಯುವ ವರೆಗೂ ಕ್ಷೇತ್ರದಾದ್ಯಂತ 8 ಟ್ಯಾಂಕರ್ ಗಳನ್ನು ಒದಗಿಸಲಾಗಿದೆ. ಕಡಿಮೆ ಬಂದಲ್ಲಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಒದಗಿಸಲಾಗುತ್ತದೆ ಎಂದು ಸಚಿವರಾದ ಶ್ರೀ ಬೈರತಿ ಸುರೇಶ ಅವರು ತಿಳಿಸಿದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments