ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್ ತೂಗುದೀಪ ಅವರ ಮಧ್ಯಂತರ ಜಾಮೀನು ಅವಧಿಯನ್ನು ಹೈಕೋರ್ಟ್ ಸೋಮವಾರ ವಿಸ್ತರಣೆ ಮಾಡಿದೆ.
ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಂದಿನ ದಿನಾಂಕದವರೆಗೂ ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ಹೈಕೋರ್ಟ್ ಆದೇಶ ನೀಡಿದೆ.
ಇಂದು ಹೈಕೋರ್ಟ್ನಲ್ಲಿ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ದರ್ಶನ್ ಪರ ವಕೀಲರಾದ ಸಿವಿ ನಾಗೇಶ್ ವಾದ ಮಂಡಿಸಿದ್ದು, ಎಸ್ ಪಿಪಿ ಪ್ರಸನ್ನ ಕುಮಾರ್ ಕೂಡ ಪ್ರತಿವಾದ ಮಂಡಿಸಿದರು. ಸುದೀರ್ಘ ವಾದ, ಪ್ರತಿವಾದ ಆಲಿಸಿದ ನ್ಯಾಯಾಧೀಶರು ದಿನಾಂಕ ಘೋಷಿಸದೆ ತೀರ್ಪು ಕಾಯ್ದಿರಿಸಿದ್ದಾರೆ. ಜೊತೆಗೆ ಆದೇಶ ಬರುವವರೆಗೂ ನಟ ದರ್ಶನ್ ವೈದ್ಯಕೀಯ ಜಾಮೀನು ಅವಧಿ ವಿಸ್ತರಿಸಿದ್ದಾರೆ.