Wednesday, April 30, 2025
24 C
Bengaluru
LIVE
ಮನೆರಾಜ್ಯಅವಳಿ ನಗರಕ್ಕೆ ನೀರಿನ ಬರ ಭಗೀರಥನಾದ ಹೆಚ್.ಕೆ ಪಾಟೀಲ್!

ಅವಳಿ ನಗರಕ್ಕೆ ನೀರಿನ ಬರ ಭಗೀರಥನಾದ ಹೆಚ್.ಕೆ ಪಾಟೀಲ್!

ಗದಗ: ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚೆನ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರು ಗುರುವಾರ ಸಾಯಂಕಾಲ ಪಾಪನಾಶಿ ಹತ್ತಿರದ ನಿಯೋಜಿತ ಕುಡಿಯುವ ನೀರಿನ ಕೆರೆ ನಿರ್ಮಾಣದ ಸ್ಥಳ ವೀಕ್ಷಿಸಿದರು.

ಗದಗ-ಬೆಟಗೇರಿ ಅವಳಿ ನಗರಕ್ಕೆ ಸಮರ್ಪಕ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಬೃಹತ ಕೆರೆ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. ಇದರಿಂದ ಅವಳಿ ನಗರದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕಲಿದೆ. ಕೆರೆ ನಿರ್ಮಾಣ ಮಾಡಿ ತುಂಗಭದ್ರ ನದಿಯ ನೀರನ್ನು ಕೆರೆಗೆ ತುಂಬಿಸಿ ಅದರಿಂದ ಅವಳಿ ನಗರಕ್ಕೆ ನೀರು ನೀಡುವ ಯೋಜನೆ ಇದಾಗಿದೆ. ಇದನ್ನು ಇಂದು ಜಿಲ್ಲಾ ಉಸ್ತುವಾರಿ ಸಚಿವರು ಸ್ಥಳ ಪರಿಶೀಲಿಸಿ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು. ಈ ಕೆರೆ ನಿರ್ಮಾಣವಾದ್ರೆ ಗದಗ ಬೆಟಗೇರಿ ಜನ ನೀರಿನ ಬರದಿಂದ ದೂರ ಉಳಿದು ಹೆಚ್ ಪಾಟೀಲ್ ರನ್ನ ಭಗೀರಥನಂತೆ ಭಾವಿಸೋದ್ರಲ್ಲಿ ಯಾವ ಅನುಮಾನವೂ ಇಲ್ಲ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments