ಕೋಲಾರ: ವಿಧಾನಸಭೆಯಲ್ಲಿ ಹನಿಟ್ರ್ಯಾಪ್ ಕುರಿತು ಸ್ಪೋಟಕ ಹೇಳಿಕೆ ನೀಡಿದ್ದ ಸಚಿವ ಕೆ.ಎನ್.ರಾಜಣ್ಣ ಅವರು ಇಂದು ಕೋಲಾರ ನಗರಕ್ಕೆ ಭೇಟಿ ನೀಡಿದ್ದ ವೇಳೆ ಭಾರಿ ಭದ್ರತೆಯನ್ನು ನೀಡಲಾಗಿದೆ. ಹೆಚ್ಚುವರಿ ಪೋಲಿಸ್ ಎಸ್ಪಿ, ಡಿವೈಎಸ್ಪಿ, ಸಿಪಿಐಗಳು, ಹಾಗೂ ನೂರಾರು ಕಾನ್ಸ್ಟೆಬಲ್ಗಳನ್ನು ಸಚಿವ ರಾಜಣ್ಣ ಭದ್ರತೆಗೆ ನಿಯೋಜಿಸಲಾಗಿದೆ.
ಈ ವೇಳೆ ಮಾಧ್ಯಮದ ಜೊತೆ ಮಾತನಾಡಿದ ಅವರು, ‘ಎಲ್ಲವನ್ನೂ ವಿಧಾನಸಭೆ ಅಧಿವೇಶನದಲ್ಲಿ ವಿವರವಾಗಿ ಹೇಳಿದ್ದೇನೆ. ಅದನ್ನು ಬಿಟ್ಟು ಹೇಳುವಂಥದ್ದು ಏನೂ ಇಲ್ಲ. ಇಂಥ ಪ್ರಕರಣ ಮೊದಲೂ ಅಲ್ಲ; ಕೊನೆಯೂ ಅಲ್ಲ. ಮುಂದೆಯೂ ನಡೆಯುತ್ತಿರುತ್ತವೆ’ ಎಂದರು.