Tuesday, January 27, 2026
26.9 C
Bengaluru
Google search engine
LIVE
ಮನೆ#Exclusive NewsTop Newsರಾಜ್ಯದಲ್ಲಿ ಹನಿಟ್ರ್ಯಾಪ್ ಜಾಲ..!ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳೇ ಟಾರ್ಗೆಟ್

ರಾಜ್ಯದಲ್ಲಿ ಹನಿಟ್ರ್ಯಾಪ್ ಜಾಲ..!ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳೇ ಟಾರ್ಗೆಟ್

ಕಲಬುರಗಿ: ಜಿಲ್ಲೆಯಲ್ಲಿ ಹನಿಟ್ರ್ಯಾಪ್‌ ಗ್ಯಾಂಗ್ ಸಕ್ರಿಯವಾಗಿದ್ದು, ಗ್ಯಾಂಗ್‌ನ ಸಂತ್ರಸ್ತೆಯೇ ಪೊಲೀಸ್ ಠಾಣೆಗೆ ದೂರು ದಾಖಲಿಸಿರುವ ಘಟನೆ ನಡೆದಿದೆ.

ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳೇ ಈ ಗ್ಯಾಂಗ್‌ನ ಟಾರ್ಗೆಟ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಇವರನ್ನು ಪರಿಚಯ ಮಾಡಿಕೊಂಡು ನಂತರ ಸಲುಗೆ ಬೆಳೆಸುತ್ತಾರೆ. ಅದಾದ ಬಳಿಕ ಮಂಚಕ್ಕೆ ಕರೆದು ವೀಡಿಯೋ ಮಾಡಲಾಗುತ್ತಿತ್ತು. ನಂತರ ಗ್ಯಾಂಗ್ ಅವರಿಂದ ಲಕ್ಷ ಲಕ್ಷ ಹಣ ವಸೂಲಿ ಮಾಡುತ್ತಿತ್ತು. ಈ ವಿಚಾರವನ್ನು ಖುದ್ದು ಹನಿಟ್ರ‍್ಯಾಪ್ ಸಂತ್ರಸ್ತೆ ಬಿಚ್ಚಿಟ್ಟಿದ್ದಾಳೆ.

ಸಂಘಟನೆ ಹೆಸರಲ್ಲಿ ಸಾಮಾಜಿಕ ಜಾಲತಾಣದ ಮೂಲಕ ಹುಡುಗಿಯರ ಪರಿಚಯ ಮಾಡಿಕೊಂಡು ಹನಿಟ್ರ್ಯಾಪ್‌ಗೆ ಬಳಸಿಕೊಳ್ಳಲಾಗುತ್ತಿದೆ. ಹುಡುಗಿಯರ ಆರ್ಥಿಕ ಪರಿಸ್ಥಿತಿ ನೋಡಿಕೊಂಡು ಆಟವಾಡುತ್ತಿದ್ದಾರೆ. 10ಕ್ಕೂ ಹೆಚ್ಚು ಹುಡುಗಿಯರನ್ನಿಟ್ಟುಕೊಂಡು ಹನಿಟ್ರ‍್ಯಾಪ್ ನಡೆಸುತ್ತಿದ್ದು, ಇದರಿಂದಾಗಿ ಹತ್ತಾರು ಕುಟುಂಬಗಳು ಬಲಿಯಾಗಿವೆ.

ಆ ಗ್ಯಾಂಗ್ ಸದಸ್ಯರು ಬಲವಂತವಾಗಿ ಹನಿಟ್ರ‍್ಯಾಪ್ ಯುವತಿಯರ ಜೊತೆ ಅತ್ಯಾಚಾರ ನಡೆಸುತ್ತಿದ್ದಾರೆ. ಸದ್ಯ ಸಂತ್ರಸ್ಥೆಯಿಂದಲೇ ಗ್ಯಾಂಗ್ ವಿರುದ್ಧ ದೂರು ದಾಖಲಾಗಿದ್ದು, ಹನಿಟ್ರ್ಯಾಪ್‌ಗೆ ಸಂಬಂಧಿಸಿದಂತೆ ರಾಜು ಲೆಂಗಟಿ, ಪ್ರಭು, ಶ್ರೀಕಾಂತ್ ರೆಡ್ಡಿ, ಮಂಜು ಭಂಡಾರಿ ಸೇರಿದಂತೆ 8 ಜನರ ವಿರುದ್ಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿವೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments