Wednesday, January 28, 2026
23.8 C
Bengaluru
Google search engine
LIVE
ಮನೆ#Exclusive NewsTop Newsಆಡಿ ಕಾರು ಮರಕ್ಕೆ ಡಿಕ್ಕಿ : ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

ಆಡಿ ಕಾರು ಮರಕ್ಕೆ ಡಿಕ್ಕಿ : ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

ಕೋಲಾರ: ಆಡಿ ಕಾರೊಂದು ಮರಕ್ಕೆ ಡಿಕ್ಕಿಯಾಗಿ ಭೀಕರ ಅಪಘಾತ ಉಂಟಾದ ಪರಿಣಾಮ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಬಚಾವಾದ ಘಟನೆ ಕೋಲಾರ ಹೊರವಲಯದಲ್ಲಿ ನಡೆದಿದೆ.

ಬಂಗಾರಪೇಟೆ ಮುಖ್ಯರಸ್ತೆ ಸಹಕಾರ ನಗರದಲ್ಲಿ ಘಟನೆ ನಡೆದಿದೆ. ಮೃತರನ್ನು ಹಾಸನ ಮೂಲದ ಹರ್ಷವರ್ಧನ್, ಬಳ್ಳಾರಿ ಮೂಲದ ಬಸವರಾಜ್ ಹಾಗೂ ಬಂಗಾರಪೇಟೆಯ ನಿಶ್ಚಲ್ ಎಂದು ಗುರುತಿಸಲಾಗಿದೆ. ಮೃತರು ಪ್ರಸಿದ್ಧ ಯೂನಿವರ್ಸಿಟಿವೊಂದರ ವಿದ್ಯಾರ್ಥಿಗಳು. ಬಂಗಾರಪೇಟೆಯ ಸಾಯಿ ಗಗನ್ ಘಟನೆಯಲ್ಲಿ ಪಾರಾಗಿದ್ದಾನೆ. ವಿದ್ಯಾರ್ಥಿಗಳು ಸಾಯಿ ಗಗನ್ ಮನೆಗೆ ಬಂದಿದ್ದರು. ಅಲ್ಲಿಂದ ವಾಪಸ್ ಕೋಲಾರಕ್ಕೆ ತೆರಳುವ ವೇಳೆ ದುರ್ಘಟನೆ ಸಂಭವಿಸಿದೆ.

ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಕೋಲಾರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments