ಹುಬ್ಬಳ್ಳಿ : ಹುಬ್ಬಳ್ಳಿಯ ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ವಿರೋಧಿಸಿ ಬಿಜೆಪಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಹುಬ್ಬಳ್ಳಿಯ ಶಹರ ಠಾಣೆಯ ಎದುರು ಪ್ರತಿಪಕ್ಷ ನಾಯಕ ಆರ್ ಅಶೋಕ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ರಾಮ ಭಕ್ತರನ್ನು ಬಂಧಿಸುವ ಹುನ್ನಾರ ಕಾಂಗ್ರೆಸ್ ಮಾಡುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್ ಅಶೋಕ ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿ ಸಾವಿರಾರು ಎಲ್ಪಿಎಸ್ ಕೇಸ್ಗಳು ಇವೆ ಆದರೆ ಅವೆಲ್ಲವನ್ನು ಬಿಟ್ಟು ಹುಬ್ಬಳ್ಳಿ ಕಡೆ ಬಂದಿರೋದು ಯಾಕೆ…? ಕರಸೇವಕರನ್ನು ಹುಡುಕಿ ಬಂಧನ ಮಾಡಿದ್ದು ನ್ಯಾಯವಾ..? ಕಾಂಗ್ರೆಸ್ಗೆ ಕಾನೂನು ಗೊತ್ತಿಲ್ಲ.. ಹಲವು ಬಾರಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿತ್ತು ಆಗ ಈ ಕೇಸ್ ಯಾಕೆ ನೆನಾಪಗಲಿಲ್ಲ ಎಂದು ಪ್ರಶ್ನಿಸಿದರು.
ಇನ್ನೂ ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಗಿಮಿಕ್ ಮಾಡುತ್ತಿದೆ ಎಂಬ ಕಾಂಗ್ರೆಸ್ ಹೇಳಿಕೆ ವಿಚಾರವಾಗಿ ಮಾತನಾಡಿದ ಆರ್ ಅಶೋಕ್, ಕಾಂಗ್ರೆಸ್ ಸೋಲುವ ಭಯದಿಂದ ಮುಸ್ಲಿಂ ಓಲೈಕೆ ಮಾಡುತ್ತಿದೆ. ಚುನಾವಣೆ ಬಂದಾಗ ಯಾವುದಾದರೂ ಒಂದು ಸಮುದಾಯ ಬೆಂಬಲ ಪಡೆಯವ ದೃಷ್ಟಿಯಿಂದ ಹಿಂದೂ ಮುಸ್ಲಿಂ ನಡುವೆ ಬೆಂಕಿ ಹಾಕುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ ಎಂದು ಹುಬ್ಬಳ್ಳಿಯಲ್ಲಿ ವಿಪಕ್ಷನಾಯಕ ಆರ್ ಅಶೋಕ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.