ಬೆಂಗಳೂರು: ಕಾಂಗ್ರೆಸ್ನಲ್ಲಿ ಸಿಎಂ ಕುರ್ಚಿ ಕಿತ್ತಾಟ ರಾಜ್ಯದಲ್ಲಿ ಭಾರೀ ಚರ್ಚೆಯಾಗುತ್ತಿದ್ದು, ಅಧಿಕಾರ ಹಂಚಿಕೆಯ ವಿಚಾರಕ್ಕೆ ನಟಿ ರಮ್ಯಾ ಪ್ರತಿಕ್ರಿಯೆ ನೀಡಿದ್ದಾರೆ.. ಇದನ್ನು ನಾನು ಡಿಸೈಡ್ ಮಾಡೋದಲ್ಲ. ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಎಂದು ಹೇಳಿದ್ದಾರೆ..
ಮಾಧ್ಯಮಗಳ ಜೊತೆ ಮಾತನಾಡಿದ ರಮ್ಯಾ ಅವರು, ಯಾರಾದರೂ ನನಗೆ ಓಕೆ. ರಾಜ್ಯಕ್ಕೆ ಒಳ್ಳೇಯದಾಗಬೇಕು. ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ವೇಣುಗೋಪಾಲ್ ನಿರ್ಧಾರ ಮಾಡ್ತಾರೆ ಎಂದಿದ್ದಾರೆ. ಪಕ್ಷದಲ್ಲಿ ಗೊಂದಲ ಹೆಚ್ಚಾಗಿದೆ ಯಾಕೆ ಎಂದು ಕೇಳಿದ್ದಕ್ಕೆ ಅದೇ ರಾಜಕೀಯ ಎಂದು ನಕ್ಕು, ಎಲ್ಲಾ ನಾಯಕರಿಗೂ ಅರ್ಹತೆ ಇದೆ. ಯಾರಾದ್ರು ಓಕೆ. ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಹೇಳಿದ್ದಾರೆ.
ರಾಜ್ಯ ಕಾಂಗ್ರೆಸ್ನ ಕುರ್ಚಿ ಕಿತ್ತಾಟ ಸದ್ಯಕ್ಕೆ ದೆಹಲಿಯ ಹೈಕಮಾಂಡ್ ಅಂಗಳ ತಲುಪಿದೆ. ಖುದ್ದು ಮಲ್ಲಿಕಾರ್ಜುನ್ ಖರ್ಗೆಯವರೇ ಮತ್ತೊಮ್ಮೆ ಬೆಂಗಳೂರಿಗೆ ಆಗಮಿಸಿದ್ದು, ರಾಜ್ಯ ಕಾಂಗ್ರೆಸ್ ಸಂಘರ್ಷಕ್ಕೆ ಮದ್ದರೆಯುವ ಸಾಧ್ಯತೆ ಇದೆ. ಇದರ ನಡುವೆ ಕೆಲ ಮಠಾಧೀಶರುಗಳೂ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಪರ ಬೆಂಬಲ ವ್ಯಕ್ತಪಡಿಸಿದ್ದಾರೆ.
ಇನ್ನೂ ಇದೇ ವೇಳೆ ಹೆಣ್ಣು ಬೆತ್ತಲೆಯಾಗಿದ್ದರು, ಗಂಡು ಕಣ್ಣೆತ್ತಿ ನೋಡಬಾರದು ನಟಿ ನಿಶ್ವಿಕಾ ನಾಯ್ಡು ಹೇಳಿಕೆ ವಿಚಾರವಾಗಿ ಮಾತನಾಡಿ, ನಿಶ್ವಿಕಾ ಹೇಳಿದ್ದು ಸರಿಯಿದೆ. ಗಂಡಸರಿಗೆ ಇರುವಷ್ಟೇ ಹಕ್ಕು ನಮಗೂ ಇದೆ. ನೀವು ಇಷ್ಟ ಬಂದ ಹಾಗೇ ಬಟ್ಟೆ ಹಾಕ್ತೀರಾ. ನಾವು ಹಾಕಬಾರದಾ? ಹೆಣ್ಣು ಮಕ್ಕಳಿಗೂ ಸ್ವಾತಂತ್ರ್ಯ ಇದೆ. ನಿಮಗೆ ಇಷ್ಟ ಇಲ್ಲ ಅಂದ್ರೆ ಕಾಮೆಂಟ್ ಮಾಡೋಕೆ ಹೋಗಬೇಡಿ. ಸೋಶಿಯಲ್ ಮೀಡಿಯಾದಲ್ಲಿ ಎಲ್ಲರದ್ದೂ ಅಕೌಂಟ್ ಇದೆ. ಅಭಿಪ್ರಾಯ ಕೂಡ ಇದೆ. ಹಾಗಾಂತ ಕಾಮೆಂಟ್ ಮಾಡಬಾರದು ಎಂದಿದ್ದಾರೆ.
ಚಿತ್ರರಂಗಕ್ಕೆ ಕಮ್ ಬ್ಯಾಕ್ ವಿಚಾರವಾಗಿ ಮಾತನಾಡಿ, 40, 50 ಸ್ಕ್ರಿಪ್ಟ್ ಕೇಳಿದ್ದೀನಿ. ಒಂದು ಸ್ಕ್ರಿಪ್ಟ್ ಇಷ್ಟ ಆಗಿದೆ. ಮುಂದೆ ನೋಡೋಣ. ಯಾರ ಜೊತೆ ಅಂತ ಹೇಳಲ್ಲ. ನಿರ್ದೇಶಕರು ಸ್ಕ್ರಿಪ್ಟ್ ಬರೆಯುತ್ತಿದ್ದು, ಈಗಾಗಲೇ ಹಿಟ್ ಸಿನಿಮಾ ಮಾಡಿದ್ದಾರೆ. ನನಗೆ ಅವರೆಂದರೆ ತುಂಬಾ ಇಷ್ಟ. ಇದೇ ವೇಳೆ ನಟ ದರ್ಶನ್ ಅಭಿನಯದ ಡೆವಿಲ್ ಸಿನಿಮಾಕ್ಕೆ ರಮ್ಯಾ ಶುಭಕೋರಿದ್ದಾರೆ.


