ಜಮ್ಮು ಕಾಶ್ಮೀರ:ನೆನ್ನೆ ಜಮ್ಮು ಕಾಶ್ಮೀರದ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ವಿರುದ್ದ ಹರಿಹಾಯ್ದ ಖರ್ಗೆ.’ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸುವವರೆಗೂ ನಾನು ಸಾಯುವುದಿಲ್ಲ. ಅಲ್ಲಿಯವರೆಗೂ ನಾನು ಬದುಕಿರುತ್ತೇನೆ’ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುಡುಗಿದ್ದಾರೆ. ಭಾನುವಾರ ಇಲ್ಲಿ ಚುನಾವಣಾ ರ್ಯಾಲಿ ವೇಳೆ ಖರ್ಗೆ ರಕ್ತದೊತ್ತಡ ಕಡಿಮೆ ಆಗಿ ವೇದಿಕೆ ಮೇಲೇ ದಿಢೀರ್ ಅಸ್ವಸ್ಥರಾದರು. ಆದರೂ ಸಾವರಿಸಿಕೊಂಡುನಿಂತೇಮಾತನಾಡಿಮೋದಿಗೆ ಈ ಮೇಲಿನಂತೆ ಸವಾಲು ಹಾಕಿದ್ದಾರೆ.ಕಾಶ್ಮೀರದ 3ನೇ ಹಂತದ ಚುನಾವಣೆಗೆ ನಿಮಿತ್ತ ಕಠುವಾ ಜಿಲ್ಲೆಯ ಜಸ್ಪೋಟಾ ಎಂಬಲ್ಲಿ ಪ್ಯಾಲಿ ನಡೆಯುತ್ತಿತ್ತು.