Wednesday, April 30, 2025
30.3 C
Bengaluru
LIVE
ಮನೆ#Exclusive NewsTop Newsವಕ್ಫ್ ನೋಟಿಸ್‌ನಿಂದ ರೈತ ಆತ್ಮಹತ್ಯೆ ಆರೋಪ – ಪೋಸ್ಟ್‌ ಹಾಕಿದ್ದ ತೇಜಸ್ವಿ ಸೂರ್ಯ ವಿರುದ್ಧ ಎಫ್‌ಐಆರ್

ವಕ್ಫ್ ನೋಟಿಸ್‌ನಿಂದ ರೈತ ಆತ್ಮಹತ್ಯೆ ಆರೋಪ – ಪೋಸ್ಟ್‌ ಹಾಕಿದ್ದ ತೇಜಸ್ವಿ ಸೂರ್ಯ ವಿರುದ್ಧ ಎಫ್‌ಐಆರ್

ಹಾವೇರಿ: ವಕ್ಫ್ ನೋಟಿಸ್ ನೀಡಿದ ಕಾರಣ ರೈತ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೋಸ್ಟ್ ಹಾಕಿದ್ದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿ ಸೆನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಪಹಣಿಯಲ್ಲಿ ವಕ್ಫ್  ಎಂದು ನಮೂದಾದ ಹಿನ್ನೆಲೆ ರೈತ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತೇಜಸ್ವಿ ಸೂರ್ಯ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದರು. ಇದೀಗ ಸಾಲಬಾಧೆಗೆ ನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸ್ ಇಲಾಖೆ ಹಾಗೂ ಹಾವೇರಿ ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ. ಈ ಕಾರಣಕ್ಕೆ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿ ಸೆನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಮೃತ ರೈತ ರುದ್ರಪ್ಪನ ಕುಟುಂಬಸ್ಥರು ಗುರುವಾರ ಹುಬ್ಬಳ್ಳಿಯಲ್ಲಿ ವಕ್ಫ್ ಕಾಯಿದೆ ತಿದ್ದುಪಡಿ ಜಂಟಿ ಸದನ ಸಮಿತಿಗೆ ವಕ್ಫ್ ಬೋರ್ಡ್‌ನಿಂದ ಅನ್ಯಾಯ ಆಗಿರೋದಾಗಿ ದೂರು ನೀಡಿದ್ದರು. ಆದರೆ ವಕ್ಫ್ ಎಂದು ನಮೂದಾಗಿದ್ದಕ್ಕೆ ರೈತ ಆತ್ಮಹತ್ಯೆ ಮಾಡಿಕೊಂಡಿಲ್ಲ ಎಂದು ಪೊಲೀಸರು ಹಾಗೂ ಜಿಲ್ಲಾಡಳಿತ ಈಗ ಸ್ಪಷ್ಟನೆ ನೀಡಿದೆ.

 

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments