ಮೈಸೂರು: ಮುಡಾ ಕೇಸ್ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಅವರಿಗೆ ಲೋಕಾಯುಕ್ತ ತನಿಖೆಯಲ್ಲಿ ಕ್ಲೀನ್ಚಿಟ್ ಸಿಕ್ಕಿತ್ತು. ಸದ್ಯ ಮುಡಾ ಕೇಸ್ನಲ್ಲಿ ರಿಲೀಫ್ ಮೂಡ್ನಲ್ಲಿರವ ಸಿಎಂಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಸಿಎಂ ವಿರುದ್ಧದ ಲೋಕಾಯುಕ್ತ ತನಿಖೆ ವರದಿ ವಿಚಾರವಾಗಿ ದೂರುದಾರ ಸ್ನೇಹಮಯಿ ಕೃಷ್ಣ ಇದೀಗ ಗಂಭೀರ ಆರೋಪ ಮಾಡಿದ್ದಾರೆ. ಆರೋಪಿ ಮಲ್ಲಿಕಾರ್ಜುನ ಸ್ವಾಮಿ 1998ರಲ್ಲಿ ದೇವರಾಜ್ ಸಹಿ ನಕಲು ಮಾಡಿದ್ದರು ಎಂಬ ದಾಖಲೆ ಮುಂದಿಟ್ಟಿದ್ದಾರೆ. ಈ ವಿಚಾರವನ್ನು ಲೋಕಾಯುಕ್ತ ವರದಿಯಲ್ಲಿ ಮುಚ್ಚಿಡಲಾಗಿದೆ. ಇದನ್ನೇ ಮುಂದಿಟ್ಟುಕೊಂಡು ಸಿಬಿಐ ತನಿಖೆಗೆ ಆದೇಶಿಸುವಂತೆ ನ್ಯಾಯಾಲಯದಲ್ಲಿ ಮನವಿ ಮಾಡುವುದಾಗಿ ತಿಳಿಸಿದ್ದಾರೆ.