Monday, June 23, 2025
26.6 C
Bengaluru
Google search engine
LIVE
ಮನೆUncategorizedಹಿರಿಯ ರಾಜಕಾರಣಿ.ಸಮಾಜವಾದಿ ಚಿಂತಕ. ಮಾಜಿ ಸಚಿವ ಶ್ರಿಕೆ.ಎಚ್. ಶ್ರೀನಿವಾಸ್ ಅವರು ಇನ್ನಿಲ್ಲ

ಹಿರಿಯ ರಾಜಕಾರಣಿ.ಸಮಾಜವಾದಿ ಚಿಂತಕ. ಮಾಜಿ ಸಚಿವ ಶ್ರಿಕೆ.ಎಚ್. ಶ್ರೀನಿವಾಸ್ ಅವರು ಇನ್ನಿಲ್ಲ

ಸಾಗರ ತಾಲ್ಲೂಕು ಕಾನುಗೋಡು ಗ್ರಾಮದವರಾದ ಶ್ರೀನಿವಾಸ್ ಜನತಾಪರಿವಾರದಲ್ಲಿ ಗುರುತಿಸಿಕೊಂಡಿದ್ದರು. ಆನಂತರ ಕಾಂಗ್ರೆಸ್‌ನಲ್ಲೂ ಇದ್ದರು. ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಅವರ ಆಪ್ತರಾಗಿದ್ದ ಶ್ರೀನಿವಾಸ್ ಸಾಂಸ್ಕೃತಿಕ ವಲಯದಲ್ಲೂ ಗುರುತಿಸಿಕೊಂಡಿದ್ದರು.

ವಕೀಲರಾಗಿ, ಕೃಷಿಕರೂ ಆಗಿದ್ದರು. ಕವನ ಸಂಕಲನಗಳನ್ನೂ ರಚಿಸಿದ್ದ ಅವರು ಸಿನೆಮಾದಲ್ಲೂ ಅಭಿನಯಿಸಿದ್ದರು.ಶ್ರೀನಿವಾಸ್ ಅವರಿಗೆ 86 ವರ್ಷ ವಯಸ್ಸಾಗಿತ್ತು.ಕೆಲ ದಿನಗಳಿಂದ ಅನಾರೋಗ್ಯ ಪೀಡಿತರಾಗಿದ್ದ ಅವರು ಬೆಂಗಳೂರನಲ್ಲಿಯೇ ನೆಲೆಸಿದ್ದರು. ಕೆ ಎಚ್. ಶ್ರೀನಿವಾಸ್ ನಿಧನದ ಬಗ್ಗೆ ಪುತ್ರಿ ವೈಶಾಲಿ ಶ್ರೀನಿವಾಸ್ ಮಾಹಿತಿ ನೀಡಿದ್ದಾರೆ. ಇಲ್ಲಿನ ಜೋಗ ರಸ್ತೆಯಲ್ಲಿರುವ ಎಲ್ ಬಿ ಕಾಲೇಜು ಇದರ ಸ್ಥಾಪಕ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.ಕಾಲೇಜಿನ ಬೆಳವಣಿಗೆಗಳಲ್ಲಿ ಇವರ ಕೊಡುಗೆ ಅಪಾರವಾಗಿತ್ತು

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments