Freedom TV

ಹಿರಿಯ ರಾಜಕಾರಣಿ.ಸಮಾಜವಾದಿ ಚಿಂತಕ. ಮಾಜಿ ಸಚಿವ ಶ್ರಿಕೆ.ಎಚ್. ಶ್ರೀನಿವಾಸ್ ಅವರು ಇನ್ನಿಲ್ಲ

ಸಾಗರ ತಾಲ್ಲೂಕು ಕಾನುಗೋಡು ಗ್ರಾಮದವರಾದ ಶ್ರೀನಿವಾಸ್ ಜನತಾಪರಿವಾರದಲ್ಲಿ ಗುರುತಿಸಿಕೊಂಡಿದ್ದರು. ಆನಂತರ ಕಾಂಗ್ರೆಸ್‌ನಲ್ಲೂ ಇದ್ದರು. ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಅವರ ಆಪ್ತರಾಗಿದ್ದ ಶ್ರೀನಿವಾಸ್ ಸಾಂಸ್ಕೃತಿಕ ವಲಯದಲ್ಲೂ ಗುರುತಿಸಿಕೊಂಡಿದ್ದರು.

ವಕೀಲರಾಗಿ, ಕೃಷಿಕರೂ ಆಗಿದ್ದರು. ಕವನ ಸಂಕಲನಗಳನ್ನೂ ರಚಿಸಿದ್ದ ಅವರು ಸಿನೆಮಾದಲ್ಲೂ ಅಭಿನಯಿಸಿದ್ದರು.ಶ್ರೀನಿವಾಸ್ ಅವರಿಗೆ 86 ವರ್ಷ ವಯಸ್ಸಾಗಿತ್ತು.ಕೆಲ ದಿನಗಳಿಂದ ಅನಾರೋಗ್ಯ ಪೀಡಿತರಾಗಿದ್ದ ಅವರು ಬೆಂಗಳೂರನಲ್ಲಿಯೇ ನೆಲೆಸಿದ್ದರು. ಕೆ ಎಚ್. ಶ್ರೀನಿವಾಸ್ ನಿಧನದ ಬಗ್ಗೆ ಪುತ್ರಿ ವೈಶಾಲಿ ಶ್ರೀನಿವಾಸ್ ಮಾಹಿತಿ ನೀಡಿದ್ದಾರೆ. ಇಲ್ಲಿನ ಜೋಗ ರಸ್ತೆಯಲ್ಲಿರುವ ಎಲ್ ಬಿ ಕಾಲೇಜು ಇದರ ಸ್ಥಾಪಕ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.ಕಾಲೇಜಿನ ಬೆಳವಣಿಗೆಗಳಲ್ಲಿ ಇವರ ಕೊಡುಗೆ ಅಪಾರವಾಗಿತ್ತು

Comments (0)

Your email address will not be published. Required fields are marked *

Back to top button