Tuesday, January 27, 2026
26.9 C
Bengaluru
Google search engine
LIVE
ಮನೆ#Exclusive NewsTop Newsಲಾರಿ- ಕಾರಿನ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಸಾವು

ಲಾರಿ- ಕಾರಿನ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಸಾವು

ಕಲಬುರಗಿ: ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ  ಸಾವನ್ನಪ್ಪಿದ್ದು , ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ಮಗದಂಪುರ ಬಳಿ ದುರಂತ ನಡೆದಿದೆ.

ಅವಿನಾಶ್(24), ಅಭಿಷೇಕ್(26), ಸಂಜೀವ್(40) ಮೃತರು ಎಂದು ಗುರುತಿಸಲಾಗಿದ್ದು. ಕಾರಿನಲ್ಲಿದ್ದವರು ಬೀದರ್​ನಿಂದ ತೆಲಂಗಾಣದ ಧಾರೂರಿನತ್ತ ತೆರಳುತ್ತಿದ್ದರು. ಈ ವೇಳೆ ತೆಲಂಗಾಣದಿಂದ ಚಿಂಚೋಳಿ ಕಡೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಮೂವರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಇನ್ನು ಘಟನಾ ಸಂಬಂಧ ಕುಂಚಾವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರಿನಲ್ಲಿದ್ದವರು ಬೀದರ್​ನಿಂದ ತೆಲಂಗಾಣದ ಧಾರೂರಿನತ್ತ ತೆರಳುತ್ತಿದ್ದರು. ಈ ವೇಳೆ ತೆಲಂಗಾಣದಿಂದ ಚಿಂಚೋಳಿ ಕಡೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಮೂವರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments