ಪಾರ್ಶ್ವವಾಯುವಿಗೆ ಒಳಗಾಗಬಹುದು ಎಂದು ನಟ ಹೇಳಿಕೊಂಡಿದ್ದರು, ಆದರೆ, ಮಧ್ಯಂತರ ಜಾಮೀನು ಪಡೆದು 5 ವಾರಗಳು ಕಳೆದರೂ, ರಕ್ತದೊತ್ತಡದಲ್ಲಿನ ವ್ಯತ್ಯಾಸವನ್ನು ಉಲ್ಲೇಖಿಸಿ ಶಸ್ತ್ರಚಿಕಿತ್ಸೆಗೆ ಒಳಗಾಗಿಲ್ಲ. ರಕ್ತದೊತ್ತಡ ಸಮಸ್ಯೆಯನ್ನು ಒಂದು ಅಥವಾ 2 ದಿನದೊಳಗೆ ನಿಯಂತ್ರಣಕ್ಕೆ ತರಬಹುದು. ಅಕ್ಟೋಬರ್ 30 ರಂದು ಮಧ್ಯಂತರ ಜಾಮೀನು ಪಡೆದ ಐದು ವಾರಗಳ ನಂತರವೂ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿಲ್ಲ.
ಬೆನ್ನುಹುರಿ ಶಸ್ತ್ರಚಿಕಿತ್ಸೆಗೆ ಒಳಗಾಗದಿದ್ದರೆ ನಾಳೆಯೇ ದರ್ಶನ್ ಸಾಯುತ್ತಾರೆ, ನಾಳೆ ಬೆಳಗ್ಗೆ ಲಕ್ವ ಹೊಡೆಯುತ್ತದೆ ಎಂದು ಹೇಳಿ ನ್ಯಾಯಾಲಯದಿಂದ ಮಧ್ಯಂತರ ಜಾಮೀನು ಪಡೆದು 5 ವಾರ ಕಳೆದರೂ ಇನ್ನೂ ಚಿಕಿತ್ಸೆ ಪಡೆದಿಲ್ಲ. ಈ ಮೂಲಕ ನ್ಯಾಯಾಲಯದ ಅನುಕಂಪವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಹೀಗಾಗಿ ದರ್ಶನ್ ಅವರಿಗೆ ನೀಡಲಾಗಿರುವ ಮಧ್ಯಂತರ ಜಾಮೀನು ರದ್ದುಪಡಿಸಬೇಕೆಂದು ರಾಜ್ಯ ಸರ್ಕಾರ ಹೈಕೋರ್ಟ್ನಲ್ಲಿ ಬಲವಾಗಿ ವಾದ ಮಂಡಿಸಿದೆ.
ಬೆನ್ನುನೋವಿಗೆ ತಕ್ಷಣವೇ ಶಸ್ತ್ರಚಿಕಿತ್ಸೆಗೆ ಒಳಗಾಗದಿದ್ದರೆ ನಾಳೆಯೇ ದರ್ಶನ್ ಸಾಯುತ್ತಾರೆ. ಪಾರ್ಶ್ವವಾಯುವಿಗೆ ಒಳಗಾಗಬಹುದು ಎಂದು ನಟ ಹೇಳಿಕೊಂಡಿದ್ದರು, ಆದರೆ, ಮಧ್ಯಂತರ ಜಾಮೀನು ಪಡೆದು 5 ವಾರಗಳು ಕಳೆದರೂ, ರಕ್ತದೊತ್ತಡದಲ್ಲಿನ ವ್ಯತ್ಯಾಸವನ್ನು ಉಲ್ಲೇಖಿಸಿ ಶಸ್ತ್ರಚಿಕಿತ್ಸೆಗೆ ಒಳಗಾಗಿಲ್ಲ. ರಕ್ತದೊತ್ತಡ ಸಮಸ್ಯೆಯನ್ನು ಒಂದು ಅಥವಾ 2 ದಿನದೊಳಗೆ ನಿಯಂತ್ರಣಕ್ಕೆ ತರಬಹುದು.
ಅಕ್ಟೋಬರ್ 30 ರಂದು ಮಧ್ಯಂತರ ಜಾಮೀನು ಪಡೆದ ಐದು ವಾರಗಳ ನಂತರವೂ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿಲ್ಲ. ದರ್ಶನ್ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಯ ಕಡೆಯಿಂದ ನವೆಂಬರ್ 6 ಮತ್ತ 21ರಂದು 2 ವೈದ್ಯಕೀಯ ವರದಿಗಳನ್ನು ನೀಡಲಾಗಿದೆ. ಜಾಮೀನಿನ ಮೇಲೆ ದರ್ಶನ್ ಬಂದ ವಾರದಲ್ಲಿ ಮೊದಲ ವರದಿ ನೀಡಲಾಗಿದೆ. ನವೆಂಬರ್ 6ರ ವರದಿಯಲ್ಲಿ ಶಸ್ತ್ರಚಿಕಿತ್ಸೆ ನಡೆಸುವವರೆಗೆ ದರ್ಶನ್ ಅವರು ಮಧ್ಯಂತರ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೆಲ್ಲವೂ ತಾತ್ಕಾಲಿಕ ಕ್ರಮವಾಗಿದ್ದು, ಶಸ್ತ್ರಚಿಕಿತ್ಸೆ ಬಾಕಿ ಇದೆ. ಇದಕ್ಕಾಗಿ ಅವರನ್ನು ಅಣಿಗೊಳಿಸಲಾಗುತ್ತಿದೆ ಎಂದು ತಿಳಿಸಲಾಗಿದೆ.
ನವೆಂಬರ್ 21ರ ವರದಿಯಲ್ಲಿ ದರ್ಶನ್ ರಕ್ತದೊತ್ತಡದಲ್ಲಿ ವ್ಯತ್ಯಯವಾಗುತ್ತಿರುವುದರಿಂದ ಅವರನ್ನು ಶಸ್ತ್ರಚಿಕಿತ್ಸೆಗೆ ಅಣಿಗೊಳಿಸಲಾಗುತ್ತಿದೆ. ಶಸ್ತ್ರಚಿಕಿತ್ಸೆಯಾದ ಬಳಿಕ ಅವರು ಎಷ್ಟು ದಿನಗಳಲ್ಲಿ ಚೇತರಿಸಿಕೊಳ್ಳಬಹುದು ಎಂಬುದನ್ನು ಆನಂತರ ಅಂದಾಜಿಸಲಾಗುವುದು ಎಂದು ತಿಳಿಸಲಾಗಿದೆ. ಇದಕ್ಕೆ ಪೂರಕವಾಗಿ ರಕ್ತದೊತ್ತಡದಲ್ಲಿನ ಏರುಪೇರಿಗೆ ಸಂಬಂಧಿಸಿದ ವರದಿಗಳನ್ನು ಸೇರಿಸಲಾಗಿದೆ.