ಬಾಗಲಕೋಟೆ : ಮಂಡ್ಯ ಜಿಲ್ಲೆ ಕೆರಗೋಡಿನಲ್ಲಿ ಹನುಮ ಧ್ವಜ ತೆರವುಗೊಳಿಸಿರುವುದನ್ನು ಖಂಡಿಸಿ ಬಾಗಲಕೋಟ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಿದರು.
ನವನಗರ ಬಿಜೆಪಿ ಕಾರ್ಯಾಲಯದಿಂದ ಬಿಜೆಪಿ ಶಾಸಕರು, ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ಮೆರವಣಿಗೆ ಭಾಗಿಯಾಗಿದ್ರು. ಜಿಲ್ಲಾಡಳಿತ ಭವನದ ಎದುರು ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ರು. ಜಿಲ್ಲಾಧಿಕಾರಿಗಳಿಗೆ ಬಿಜೆಪಿ ಮುಖಂಡರು ಮನವಿ ಸಲ್ಲಿಸಿದರು.