Wednesday, April 30, 2025
35.6 C
Bengaluru
LIVE
ಮನೆರಾಜ್ಯಗುರುಲಿಂಗೇಶ್ವರ ಮಠದಲ್ಲಿ ಭುಗಿಲೆದ್ದ ಭಕ್ತರ ಆಕ್ರೋಶ; ರಂಭಾಪುರಿ ಶ್ರೀಗಳ ಕಾರಿನ ಮೇಲೆ ಚಪ್ಪಲಿ ಎಸೆತ

ಗುರುಲಿಂಗೇಶ್ವರ ಮಠದಲ್ಲಿ ಭುಗಿಲೆದ್ದ ಭಕ್ತರ ಆಕ್ರೋಶ; ರಂಭಾಪುರಿ ಶ್ರೀಗಳ ಕಾರಿನ ಮೇಲೆ ಚಪ್ಪಲಿ ಎಸೆತ

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯ ಕಲಾದಗಿಯ ರಂಭಾಪುರಿ ಪಂಚಗೃಹ ಗುರುಲಿಂಗೇಶ್ವರ ಮಠದ ಪೀಠಾಧಿಪತಿ ಆಯ್ಕೆ ಇದೀಗ ಭಾರಿ ವಿವಾದಕ್ಕೆ ಕಾರಣವಾಗಿದೆ. ಭಕ್ತರು ಹಾಗೂಸ್ವಾಮೀಜಿ ನಡುವಿನ ವಿವಾದ ತಾರಕಕ್ಕೇರಿದ್ದು, ವಿವಾದ ಕೋರ್ಟ್​ ನಲ್ಲಿದ್ದಾಗಲೇ ಗಂಗಾಧರ ಸ್ವಾಮೀಜಿ, ಮಠಕ್ಕೆ ಸೇರಿದ ಹೊಲ ಊಳುಮೆ ಮಾಡಿದ್ದಾರೆ. ಇದರಿಂ ಭಕ್ತರ ಆಕ್ರೋಶಕ್ಕೆ ಕಾರಣವಾಗಿದ್ದು, ಕಲಾದಗಿ ಗುರುಲಿಂಗೇಶ್ವರ ಮಠದಲ್ಲಿ ಮಹಿಳಾ ಭಕ್ತರಾದಿಯಾಗಿ ಎಲ್ಲರೂ ಪ್ರತಿಭಟನೆಗಿಳಿದಿದ್ದಾರೆ. ಈ ವೇಳೆ ರಂಭಾಪುರಿ ಶ್ರೀಗಳ ಕಾರಿನ ಮೇಲೆ ಮಹಿಳೇಯೋರ್ವರು ಚಪ್ಪಲಿ ಎಸೆದಿದ್ದಾರೆ.

ರಂಭಾಪುರಿ ಶ್ರೀಗಳು ಬಾಗಲಕೋಟೆಯಿಂಧ ಕಲಾದಗಿ ಮಾರ್ಗವಾಗಿ ಉದಗಟ್ಟಿ ಗ್ರಾಮಕ್ಕೆ ಅಡ್ಡಪಲ್ಲಕ್ಕಿ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು. ಈ ವೆಳೆ ಭಕ್ತರು, ರಂಭಾಪುರಿ ಶ್ರೀ ಪ್ರಯಾಣೀಸುತ್ತಿದ್ದ ಕಾರನ್ನು ಅಡ್ಡಹಾಕಿ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ. ಅಲ್ಲದೇ ಈ ವೇಳೆ ಮಹಿಳೆಯೋರ್ವರು ಕಾರಿನ ಮೇಲೆ ಚಪ್ಪಲಿ ಎಸೆದಿದ್ದಾರೆ.

 

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments