Friday, November 21, 2025
20 C
Bengaluru
Google search engine
LIVE
ಮನೆಕ್ರೈಂ ಸ್ಟೋರಿರಾಮೇಶ್ವರಂ ಕೆಫೆ ಬಾಂಬರ್‌; ಬಳ್ಳಾರಿ ಶಬ್ಬೀರ್‌ ಎನ್‌ಐಎ ವಶಕ್ಕೆ!

ರಾಮೇಶ್ವರಂ ಕೆಫೆ ಬಾಂಬರ್‌; ಬಳ್ಳಾರಿ ಶಬ್ಬೀರ್‌ ಎನ್‌ಐಎ ವಶಕ್ಕೆ!

ಬಳ್ಳಾರಿ: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‍ಐಎ ಅಧಿಕಾರಿಗಳು ತೀವ್ರ ತನಿಖೆಗೆ ಇಳಿದಿದ್ದು, ಇದೀಗ ಬಳ್ಳಾರಿಯಲ್ಲಿ ಓರ್ವನನ್ನು ವಶಕ್ಕೆ ಪಡೆದಿದ್ದಾರೆ.ಇಂದು ಶಬ್ಬೀರ್‌ ಎಂಬವನನ್ನ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬಳಿಕ ಹೆಚ್ಚಿನ ವಿಚಾರಣೆಗೆ ಬೆಂಗಳೂರಿಗೆ ಕರೆದೊಯ್ದಿದ್ದಾರೆ. ರಾಮೇಶ್ವರಂ ಬಾಂಬ್ ಪ್ರಕರಣಕ್ಕೂ ಯುವಕನಿಗೂ ಲಿಂಕ್ ಇದ್ಯಾ ಎಂಬ ಅನುಮಾನದ ಮೇಲೆ ಶಬ್ಬೀರ್‌ ನನ್ನು ತನಿಖೆಗೆ ಒಳಪಡಿಸಲಾಗಿದೆ.

ಶಂಕಿತ ಉಗ್ರ ಬಳ್ಳಾರಿಗೆ ಬಂದ ಸಮಯದಲ್ಲಿ ಕೌಲ್ ಬಜಾರ್ ನಿವಾಸಿ ಶಬ್ಬೀರ್‌ ನನ್ನು ಭೇಟಿ ಮಾಡಿದ್ದ. ಅಲ್ಲದೇ ಹೈದರಾಬಾದ್‍ಗೆ ಹೋಗಲು ಆತನಿಗೆ ಸಹಾಯ ಮಾಡಿದ್ದ ಎನ್ನುವ ಆರೋಪದ ಮೇಲೆ ಅಧಿಕಾರಿಗಳು ಶಬ್ಬೀರ್‌ ನನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ಶಂಕಿತ ಉಗ್ರ ಹೈದರಾಬಾದ್‍ನಲ್ಲಿ ತಲೆಮರೆಸಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments