ಬೆಂಗಳೂರಿನ ರಾಮೇಶ್ವರಂ ಕೆಫೆ ಬಳಿ ಸ್ಪೋಟವಾಗಿದ್ದು ರಾಜ್ಯದ ನಾಗರಿಕರನ್ನು ಭಯಭೀತರನ್ನಾಗುವಂತೆ ಮಾಡಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಆಗಂತುಕರ ಚಟುವಟಿಕೆಗಳು ಹೆಚ್ಚಾಗುತ್ತಿದೆ.
ಇನ್ನೂ ಇದಕ್ಕೆ ರಾಜ್ಯ ಸರ್ಕಾರದ ವರ್ತನೆಗಳೂ ಇಂತಹ ಘಟನೆಗಳು ಹೆಚ್ಚಾಗಲು ಕಾರಣವಾಗುತ್ತಿದೆ. ರಾಜ್ಯ ಸರ್ಕಾರ ಇವತ್ತಿನ ಸ್ಪೋಟವನ್ನು ನಿರ್ಲಕ್ಷ್ಯ ಮಾಡದೇ ಗಂಭೀರವಾಗಿ ತನಿಖೆ ನಡೆಸಿ ತಪ್ಪಿತಸ್ಥರನ್ನು ಬಂಧಿಸಿ ಉಗ್ರ ಶಿಕ್ಷೆ ನೀಡಬೇಕು.