ಬೆಂಗಳೂರು : ಬೆಂಗಳೂರಿನಲ್ಲಿ ರಾಮೇಶ್ವರಂ ಕೆಫೆ ಸ್ಫೋಟದ ಬಳಿಕ ಮತ್ತೊಂದು ಹೋಟೆಲ್ಗೆ ಬಾಂಬ್ ಬೆದರಿಕೆ ಬಂದಿದೆ. ಮಹಾದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯ ಪಾಸ್ತಾ ಸ್ಟ್ರೀಟ್ ರೆಸ್ಟೋರೆಂಟ್ ಗೆ ಹುಸಿ ಬಾಂಬ್ ಬೆದರಿಕೆ ಕರೆ ಬಂದಿದೆ.
ಮೂರು ತಿಂಗಳಿಂದ ಸರಿಯಾದ ವೇತನ ನೀಡಿಲ್ಲ ಎಂಬ ಕಾರಣಕ್ಕೆ ಪಾಸ್ತಾ ಸ್ಟ್ರೀಟ್ನ ಹಳೆಯ ಉದ್ಯೋಗಿ ವೇಲು ಮುರುಗನ್ ಎಂಬಾತ ಕರೆ ಮಾಡಿ ಬೆದರಿಕೆ ಹಾಕಿದ್ದ. ಪ್ರಕರಣ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಸಂಬಳ ಕೊಟ್ಟಿಲ್ಲ ಎಂಬ ಕಾರಣಕ್ಕೆ ತಾನು ಈ ಬೆದರಿಕೆ ಹಾಕಿದ್ದಾಗಿ ವೇಲು ಮುರುಗನ್ ತಪ್ಪೋಪ್ಪಿಕೊಂಡಿದ್ದಾನೆ.