ಬೆಂಗಳೂರು : ಹಾವೇರಿಯ ಹಾನಗಲ್ ಗ್ಯಾಂಗ್ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸರ್ಕಾರವೇ ಪ್ರಕರಣ ಮುಚ್ಚಿ ಹಾಕಲು ಮುಂದಾಗಿದೆ ಎಂದು ವಿರೋಧ ಪಕ್ಷದ ನಾಯಕರು ಆರೋಪಿಸಿದ್ದಾರೆ. ಈ ಆರೋಪದ ಬೆನ್ನಲೆ ಇಂದು ಸಿಎಂ ಸಿದ್ದರಾಮಯ್ಯ ಹಾವೇರಿ ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ. ಸಂತ್ರಸ್ತೆಯನ್ನು ಸಿಎಂ ಭೇಟಿ ಮಾಡುತ್ತಾರಾ ಎಂಬ ಕುತೂಹಲ ಮೂಡಿದೆ.
ಹಾನಗಲ್ನಲ್ಲಿ ನಡೆದಿದ್ದ ಗ್ಯಾಂಗ್ರೇಪ್ ಪ್ರಕರಣ ಸಂಪೂರ್ಣ ರಾಜಕೀಯಕ್ಕೆ ತಿರುಗಿದೆ. ಈ ಘಟನೆ ಖಂಡಿಸಿ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಮಾಜಿ ಸಿಎಂ ಬೊಮ್ಮಾಯಿ, ಬಿ.ವೈ ವಿಜಯೇಂದ್ರ ಹಾಗೂ ಬಿಜೆಪಿ ಮಹಿಳಾ ಘಟಕ ಭಾನುವಾರ ಸಾಂತ್ವನ ಕೇಂದ್ರಕ್ಕೆ ಬೇಟಿ ಮಾಡಲು ಪ್ಲಾನ್ ಮಾಡಿತ್ತು. ಆದ್ರೆ ಶನಿವಾರ ರಾತ್ರಿಯೇ ಬ್ಯಾಡಗಿ ಕಾಂಗ್ರೆಸ್ ಶಾಸಕ ಬಸವರಾಜು ಶಿವಣ್ಣನವರ್ ನೇತೃತ್ವದಲ್ಲಿ ಸಾಂತ್ವನ ಕೇಂದ್ರಕ್ಕೆ ಹೋಗಿದ್ದ ಕಾಂಗ್ರೆಸ್ ನಾಯಕರು, ಸಂತ್ರಸ್ತೆಯನ್ನು ಸ್ಥಳಾಂತರ ಮಾಡಲು ಮುಂದಾಗಿದ್ದರು. ಆಗ ಹೈಡ್ರಾಮಾ ನಡೆದಿದ್ದರಿಂದ ಭಾನುವಾರ ಬೆಳಗ್ಗೆ ಸಂತ್ರಸ್ತೆಯನ್ನು ಶಿರಸಿಗೆ ಸ್ಥಳಾಂತರ ಮಾಡಿದ್ದಾರೆ.
ಇನ್ನು ಬಿಜೆಪಿ ನಿಯೋಗ ಹಾವೇರಿ ಸಾಂತ್ವನ ಕೇಂದ್ರಕ್ಕೆ ಭೇಟಿ ನೀಡಿತ್ತು. ಅತ್ತ ಸಂತ್ರಸ್ತೆಯನನು ಸ್ಥಳಾಂತರ ಮಾಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿತ್ತು.
ಹಾನಗಲ್ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದುವರೆಗೆ ಒಟ್ಟು 7 ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಆರೋಪಿಗಳಿಗೆ ಸೂಪಿ ಪೋರಂ ಸಂಘಟನೆ ಲಿಂಕ್ ದೆ ಎನ್ನಲಾಗ್ತಿದೆ. ಬಿಜೆಪಿ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಎಸ್ಪಿ , ಸಂತ್ರಸ್ತೆ ವಿಚಾರಣೆ ಮುಗಿದಿದೆ. ಹೀಗಾಗಿ ಸಾಂತ್ವನ ಕೆಂದ್ರದಿಂದ ಶಿಫ್ಟ್ ಮಾಡಿದ್ದೇವೆ ಎಂದಿದ್ದಾರೆ.