ಬೆಂಗಳೂರು : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ವಾಪಸ್ ಹೋದ ಬೆನ್ನಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ ಅಲರ್ಟ್ ಆಗಿದ್ದಾರೆ. ಮಹತ್ವದ ಬೆಳವಣಿಗೆಯಲ್ಲಿ ಮಾಜಿ ಡಿಸಿಎಂ ಅಥಣಿ ಶಾಸಕ ಲಕ್ಷ್ಮಣ ಸವದಿ ಡಿಸಿಎಂ ಡಿಕೆಶಿಯನ್ನು ಭೇಟಿಯಾಗಿದ್ದಾರೆ. ಶೆಟ್ಟರ್ ವಾಪಸ್ ಹೋದ ಬೆನ್ನಲ್ಲೇ ಸವದಿ ಡಿಕೆಶಿ ಭೇಟಿ ಕುತೂಹಲ ಮೂಡಿಸಿದೆ. ಸವದಿ ಭೇಟಿಯಾದ ಫೋಟೋವನ್ನ ಸ್ವತಃ ಡಿ.ಕೆ ಶಿವಕುಮಾರ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಮಂತ್ರಿ ಸ್ಥಾನ ಸಿಗದೆ ಬೇಸರಗೊಂಡಿರುವ ಸವದಿ ವಾಪಸ್ ಬಿಜೆಪಿಗೆ ಹೋಗುತ್ತಾರೆ ಎಂಬ ಗುಸುಗುಸು ಇದೆ. ಆದ್ರೆ ತಾನು ಬಿಜೆಪಿಗೆ ಹೋಗಲ್ಲ ಅಂತಾ ಹಲವು ಬಾರಿ ಸವದಿ ಹೇಳಿದ್ದಾರೆ. ಶೆಟ್ಟರ್ ಬಿಜೆಪಿಗೆ ಹೋಗುತ್ತಿದ್ದಂತೆ ಸವದಿ ನಡೆ ಏನು ಎಂಬುವುದು ಕುತೂಹಲ ಮೂಡಿಸಿದೆ.