Thursday, May 1, 2025
25.2 C
Bengaluru
LIVE
ಮನೆರಾಜ್ಯತಾಂತ್ರಿಕ ದೋಷ ಆನ್​ಲೈನ್​ ಸೇವೆ ಕಟ್​

ತಾಂತ್ರಿಕ ದೋಷ ಆನ್​ಲೈನ್​ ಸೇವೆ ಕಟ್​

ಬೆಂಗಳೂರು: ನೀವ್‌ ಏನಂದ್ರು ಆನ್ ಲೈನ್‌ನಲ್ಲಿ ವಿದ್ಯುತ್‌ ಬಿಲ್‌ ಪಾವತಿ ಮಾಡ್ತಿದೀರಾ? ಆಗಾದ್ರೆ ಒಮ್ಮೆ ಈ ಸುದ್ದಿ ನೋಡಿ ನಿಜಕ್ಕೂ ಶಾಕ್‌ ಆಗೋದು ಗ್ಯಾರಂಟಿ ಒಂದಾಲ್ಲ, ಎರಡಲ್ಲ ಬರೋಬ್ಬರಿ 10 ದಿನಗಳ ಕಾಲ ಎಸ್ಕಾಂ ವ್ಯಾಪ್ತಿಯಲ್ಲಿ ಇಂಧನ ಇಲಾಖೆಯು ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣ ಮಾಡುತ್ತಿದೆ. ಇಂಧನ ಇಲಾಖೆಯ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣ ಹಿನ್ನೆಲೆಯಲ್ಲಿ ಮಾರ್ಚ್ 10 ರಿಂದ 19 ರವರೆಗೆ ಒಟ್ಟು ಹತ್ತು ದಿನಗಳ ಕಾಲ ರಾಜ್ಯದ ಎಲ್ಲಾ ಎಸ್ಕಾಂಗಳ ಆನ್‌ಲೈನ್ ಸೇವೆಗಳು ನಗರ ಪ್ರದೇಶದ ಗ್ರಾಹಕರಿಗೆ ಲಭ್ಯವಿರುವುದಿಲ್ಲ ಎಂದು ಇಂಧನ ಇಲಾಖೆ ತಿಳಿಸಿದೆ.

ರಾಜ್ಯದ ಎಲ್ಲಾ ಎಸ್ಕಾಂಗಳ ವ್ಯಾಪ್ತಿಯಲ್ಲಿ ಒಟ್ಟು ಹತ್ತು ದಿನಗಳ ಕಾಲ ವಿದ್ಯುತ್ ಬಿಲ್ ಪಾವತಿ, ಹೊಸ ಸಂಪರ್ಕಕ್ಕಾಗಿ ಆನ್‌ಲೈನ್ ಅರ್ಜಿ ಸಲ್ಲಿಕೆ, ಹೆಸರು ಮತ್ತು ಜಕಾತಿ ಬದಲಾವಣೆ ಸೇರಿದಂತೆ ಯಾವುದೇ ಆನ್ ಲೈನ್ ಸೇವೆಗಳು ಈ ಅವಧಿಯಲ್ಲಿ ಲಭ್ಯವಿರುವುದಿಲ್ಲ. ಆನ್‌ಲೈನ್ ಸೇವೆಗಳು ಮಾತ್ರವೇ ತಾತ್ಕಾಲಿಕವಾಗಿ ಸ್ಥಗಿತಗೊಂಡಿರುತ್ತವೆಯೇ ಹೊರತು ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಬದಲಾವಣೆ ಆಗಲಿ, ಕಡಿತವಾಗಲಿ ಮಾಡುವುದಿಲ್ಲ.ತಂತ್ರಾಂಶವು ಕಾರ್ಯಾರಂಭಗೊಂಡ ನಂತರ ಸ್ಥಿರಗೊಳ್ಳಲು ಸುಮಾರು 15 ದಿನಗಳ ಕಾಲಾವಕಾಶ ಬೇಕಿರುವುದರಿಂದ ಈ ಸಮಯದಲ್ಲಿ ತಂತ್ರಾಂಶದ ಕಾರ್ಯನಿರ್ವಹಣೆಯಲ್ಲಿ ಸ್ವಲ್ಪ ಮಟ್ಟದ ವ್ಯತ್ಯಯ ಉಂಟಾಗಬಹುದು ಎಂದು ಮಾಹಿತಿ ನೀಡಿದೆ

ತಂತ್ರಾಂಶವು ಕಾರ್ಯಾರಂಭಗೊಂಡ ನಂತರ ಸ್ಥಿರಗೊಳ್ಳಲು ಸುಮಾರು 15 ದಿನಗಳ ಕಾಲಾವಕಾಶ ಬೇಕಿರುವುದರಿಂದ ಈ ಸಮಯದಲ್ಲಿ ತಂತ್ರಾಂಶದ ಕಾರ್ಯನಿರ್ವಹಣೆಯಲ್ಲಿ ಸ್ವಲ್ಪ ಮಟ್ಟದ ವ್ಯತ್ಯಯ ಉಂಟಾಗಬಹುದು ಎಂದು ಪ್ರಕಟಣೆ ತಿಳಿಸಿದೆ, ಆದರೆ ಸಾಫ್ಟ್ ವೇರ್ ಉನ್ನತೀಕರಣ ಸಂದರ್ಭದಲ್ಲಿ ವಿದ್ಯುತ್ ಪಾವತಿ ಸಾಧ್ಯವಾಗದ ಕಾರಣ, ಗ್ರಾಹಕರ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುವುದಿಲ್ಲವೆಂದು ಈ ಮೂಲಕ ತಿಳಿಸಲಾಗಿದೆ.

ಯಾವ ನಗರಗಳಲ್ಲಿ ಆನ್‌ಲೈನ್‌ ಸೇವೆ ಇರುವುದಿಲ್ಲ

ಬೆಂಗಳೂರು, ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕೋಲಾರ, ಚಿಂತಾಮಣಿ, ಕನಕಪುರ, ರಾಮನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಸಿರಾ, ಚನ್ನಪಟ್ಟಣ, ಆನೇಕಲ್, ಮುಳುಬಾಗಿಲು, ಬಂಗಾರಪೇಟೆ, ಹೊಸಕೋಟೆ, ದೊಡ್ಡಬಳ್ಳಾಪುರ, ಕೆ.ಜಿ.ಎಫ್, ಚಳ್ಳಕೆರೆ, ಕುಣಿಗಲ್, ಹರಪ್ಪನಹಳ್ಳಿ, ಹರಿಹರ, ಹಿರಿಯೂರು, ತಿಪಟೂರು ಹಾಗೂ ಗೌರಿಬಿದನೂರು.

ಸೆಸ್ಕ್‌: ಮೈಸೂರು, ಮಳವಳ್ಳಿ, ನಂಜನಗೂಡು, ಮಂಡ್ಯ, ಹುಣಸೂರು, ಚಾಮರಾಜನಗರ, ಕೆ ಆರ್ ನಗರ, ಅರಸೀಕೆರೆ, ಮಡಿಕೇರಿ, ಕೊಳ್ಳೆಗಾಲ, ಹಾಸನ ಹಾಗೂ ಚನ್ನರಾಯಪಟ್ಟಣ.

ಮೆಸ್ಕಾಂ: ಮಂಗಳೂರು, ಬಂಟ್ವಾಳ, ಕಡೂರು, ತರೀಕೆರೆ, ಪುತ್ತೂರು, ಉಡುಪಿ, ಶಿಕಾರಿಪುರ, ಸಾಗರ, ಶಿವಮೊಗ್ಗ, ಭದ್ರಾವತಿ ಹಾಗೂ ಚಿಕ್ಕಮಗಳೂರು.

ಜೆಸ್ಕಾಂ: ಗುಲ್ಬರ್ಗ, ಮಾನವಿ, ಸಿಂಧನೂರು, ಬೀದರ್‌, ಗಂಗಾವತಿ, ಸೇಡಂ, ಬಸವಕಲ್ಯಾಣ, ವಾಡಿ, ಅಲನಾಡ್, ಭಾಲ್ಕಿ, ಶಹಾಬಾದ್, ಶಹಾಪುರ, ಶೋರಾಪುರ, ಸಿರಗುಪ್ಪಾ, ಕಂಪ್ಲಿ, ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಹುಮ್ಮಾಬಾದ್ ಹಾಗೂ ಹೊಸಪೇಟೆ.

ಹೆಸ್ಕಾಂ: ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಾರವಾರ, ನಿಪ್ಪಾಣಿ, ಜಮಖಂಡಿ, ಬೈಲಹೊಂಗಲ, ಲಕ್ಷ್ಮೀಶ್ವರ, ನರಗುಂದ, ರಾಮದುರ್ಗ, ಚಿಕ್ಕೋಡಿ, ಗುಳೇದಗುಡ್ಡ, ಮಹಾಲಿಂಗಪುರ, ಅಥಣಿ, ಭಟ್ಕಳ, ದಾಂಡೇಲಿ, ಇಂಡಿ, ಸವದತ್ತಿ, ಸವನೂರು, ಸಿರ್ಸಿ, ಕುಮಟಾ, ಬಾಗಲಕೋಟೆ, ರಬಕವಿ-ಬನಹಟ್ಟಿ, ಗದಗ, ಗೋಕಾಕ್, ಹಾವೇರಿ, ಇಳಕಲ್, ಮುಧೋಳ, ರಾಣೆಬೆನ್ನೂರು ಹಾಗೂ ವಿಜಯಪುರ ಪಟ್ಟಣದಲ್ಲಿ ಆನ್ ಲೈನ್ ಸೇವೆಗಳು ಲಭ್ಯವಿರುವುದಿಲ್ಲ.

ಈ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಲು ಪರಿಣಿತಿಹೊಂದಿದ ಮಾಹಿತಿ ತಂತ್ರಜ್ಞರ(IT) ತಂಡ 24/7 ಕಾರ್ಯನಿರ್ವಹಿಸಲಿದೆ. ಗ್ರಾಹಕರು ಸೇವಾ ಸ್ಥಗಿತ ಕಾಲದಲ್ಲಿ ಸಹಕರಿಸಬೇಕಾಗಿ ಈ ಮೂಲಕ ಮನವಿ ಮಾಡಿಕೊಳ್ಳಲಾಗುತ್ತಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments