Wednesday, June 25, 2025
26.3 C
Bengaluru
Google search engine
LIVE
ಮನೆಸುದ್ದಿಅಭಿವೃದ್ದಿಯ ನೆಪದಲ್ಲಿ‌ ಮರಗಳಿಗೆ ಕೊಡಲಿ ಏಟು

ಅಭಿವೃದ್ದಿಯ ನೆಪದಲ್ಲಿ‌ ಮರಗಳಿಗೆ ಕೊಡಲಿ ಏಟು

ಬೆಂಗಳೂರು : ಅಭಿವೃದ್ದಿಯ ನೆಪದಲ್ಲಿ‌ ಮರಗಳ ಮಾರಣಹೋಮಕ್ಕೆ ತಯಾರಿ ನಡಿಯುತ್ತಿದೆ. ಕೆ.ಆರ್ ಪುರ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಮರಗಳನ್ನು ಕಡಿಯಲು ತಯಾರಿನಡೆಸುತ್ತಿದ್ದು, ಶವಗಾರ ನಿರ್ಮಾಣಕ್ಕಾಗಿ 70 ಮರಗಳನ್ನು ಕಡಿಯಲು ಚಿಂತನೆ ನಡೆಸುತ್ತಿದ್ದಾರೆ. ಈ ವಿಚಾರಕ್ಕೆ ಸಾರ್ವಜನಿಕರಿಂದ ಭಾರಿ ವಿರೋಧ ವ್ಯಕ್ತವಾಗುತ್ತಿದೆ.ಇನ್ನುಮರಗಳನ್ನು ಕಡಿಯದಂತೆ ಪರಿಸರ ಪ್ರೇಮಿಗಳಿಂದ ಎಚ್ಚರಿಕೆ ನೀಡಿದ್ದಾರೆ.

ಕೆ.ಆರ್.ಪುರ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಶವಾಗಾರ ಕಟ್ಟಡ ನಿರ್ಮಾಣಕ್ಕಾಗಿ ನಿಗದಿಪಡಿಸಲಾಗಿದ್ದ ಸ್ಥಳಗಳಲ್ಲಿರುವ ಸುಮಾರು 70 ಗಿಡ-ಮರಗಳನ್ನು ತೆರವುಗೊಳಿಸಲು ಆಸ್ಪತ್ರೆ ಅಧಿಕಾರಿಗಳು ಮುಂದಾಗಿರುವುದು ಖಂಡನೀಯ ಎಂದು ವೃಕ್ಷ ಬಚಾವೋ ಆಂದೋಲನ ಸಮಿತಿ ಮುಖ್ಯಸ್ಥ ಪರಿಸರ ಮಂಜು ಹೇಳಿದ್ದಾರೆ.

ಕೆ.ಆರ್.ಪುರ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ 100 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಕಾಮಗಾರಿ ಭಾಗಶಃ ಮುಕ್ತಾಯದ ಹಂತದಲ್ಲಿದೆ. ಸದರಿ ಕಾಮಗಾರಿಯೊಂದಿಗೆ ಅನುಮೋದನೆಯಾಗಿರುವ ಶವಾಗಾರ ಕಟ್ಟಡ ನಿರ್ಮಾಣಕ್ಕಾಗಿ ಸ್ಥಳ ನಿಗದಿಪಡಿಸಲಾಗಿದ್ದು, ನಿಗದಿಪಡಿಸಲಾಗಿರುವ ಸ್ಥಳದಲ್ಲಿ ಗಿಡ-ಮರ ಇರುವುದರಿಂದ ಕಾಮಗಾರಿ ಪ್ರಾರಂಭಿಸಲು ಸಾಧ್ಯವಾಗಿಲ್ಲ. ಹೀಗಾಗಿ, ಸದರಿ ಮರಗಳನ್ನು ತೆರವುಗೊಳಿಸಲು ಕಾಮಗಾರಿಯನ್ನು ಶೀಘ್ರವಾಗಿ ಪ್ರಾರಂಭಿಸಲು ಸಹಕರಿಸಬೇಕು ಎಂದು ಸಾರ್ವಜನಿಕ ಆಸ್ಪತ್ರೆಯ ಅಧಿಕಾರಿಗಳು ಬಿಬಿಎಂಪಿ ಅರಣ್ಯ ಘಟಕದ ಉಪ ಸಂರಕ್ಷಣಾಧಿಕಾರಿಗೆ ಪತ್ರ ಬರೆದಿದ್ದಾರೆ.

ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ವೃಕ್ಷ ಬಚಾವೋ ಆಂದೋಲನ ಸಮಿತಿ ಮುಖ್ಯಸ್ಥ ಪರಿಸರ ಮಂಜು, “ಈ ಸಾರ್ವಜನಿಕ ಆಸ್ಪತ್ರೆ ಸ್ವಚ್ಛ ಗಾಳಿ ಮತ್ತು ಉತ್ತಮ ಪರಿಸರ ನೀಡುವ ತಾಣವಾಗಿದೆ. ಈ ಆಸ್ಪತ್ರೆಯಲ್ಲಿ 36 ಫಿಕಸ್ ಬೆಂಜಮಿನ್, 10 ಹೊಂಗೆಮರ, 10 ಮಹಾಗನಿ, 4 ಉವರ್ಸಿ, 10 ಟಬಿಬಿಯಾ ರೋಜ್, 5 ಬೂರುಗ ಇಂತಹ ಸುಮಾರು 70ಕ್ಕೂ ಹೆಚ್ಚು ಬಹು ಉಪಯೋಗಿ ವೃಕ್ಷಗಳನ್ನು ಕಡಿಯಲು ಮುಂದಾಗಿರುವುದು ಸರಿಯಲ್ಲ” ಎಂದು ಹೇಳಿದರು. ‌

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments