Tuesday, January 27, 2026
26.7 C
Bengaluru
Google search engine
LIVE
ಮನೆರಾಜಕೀಯಮೈಸೂರು ಪೇಂಟ್ಸ್ ಕಾರ್ಖಾನೆಗೆ ಬ್ರ್ಯಾಂಡ್ ವರ್ಚಸ್ಸು: ಎಂ ಬಿ ಪಾಟೀಲ

ಮೈಸೂರು ಪೇಂಟ್ಸ್ ಕಾರ್ಖಾನೆಗೆ ಬ್ರ್ಯಾಂಡ್ ವರ್ಚಸ್ಸು: ಎಂ ಬಿ ಪಾಟೀಲ

ಬೆಂಗಳೂರು : ಮೈಸೂರು ಮಹಾರಾಜರ ಕಾಲದ ಪ್ರತಿಷ್ಠಿತ ಕಾರ್ಖಾನೆಗಳಲ್ಲಿ ಒಂದಾಗಿರುವ `ಮೈಸೂರು ಬಣ್ಣ ಮತ್ತು ಅರಗಿನ ಕಾರ್ಖಾನೆ’ಯ ಉತ್ಪಾದನೆ ಮತ್ತು ಆರ್ಥಿಕ ವಹಿವಾಟನ್ನು ಹೆಚ್ಚಿಸಿ, ಈ ಉದ್ದಿಮೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸೋಮವಾರ ಇಲ್ಲಿ ಕಾರ್ಖಾನೆಯ ಆಡಳಿತ ಮಂಡಲಿಯ ಸಭೆ ನಡೆಸಿದರು.

ಬಳಿಕ ಮಾತನಾಡಿದ ಅವರು, `ವಿಶ್ವೇಶ್ವರಯ್ಯನವರ ದಿವಾನಗಿರಿಯ ಕಾಲದಲ್ಲಿ ಆರಂಭವಾದ ಬಣ್ಣ ಮತ್ತು ಅರಗಿನ ಕಾರ್ಖಾನೆಯು ಸದ್ಯಕ್ಕೆ ವಾರ್ಷಿಕ 34-35 ಕೋಟಿ ರೂ. ವಹಿವಾಟು ನಡೆಸುತ್ತಿದೆ. ಈಗ ಲೋಕಸಭಾ ಚುನಾವಣೆ ಬಂದಿರುವುದರಿಂದ ಶಾಯಿ ತಯಾರಿಕೆಗೆ ಬೇಡಿಕೆ ಬಂದಿದ್ದು, ಈ ವರ್ಷ ವಹಿವಾಟು 77 ಕೋಟಿ ರೂ. ತಲುಪಲಿದೆ. ಆದರೆ, ಈಗಿನ ಸ್ಪರ್ಧಾತ್ಮಕ ಯುಗದಲ್ಲಿ ಒಂದು ಉದ್ದಿಮೆ ಹೀಗಿದ್ದರೆ ಸಾಲುವುದಿಲ್ಲ ಎಂದರು.
ಇದಕ್ಕಾಗಿ, ಬಣ್ಣಗಳ ಉದ್ಯಮದಲ್ಲಿ ಪಳಗಿರುವ ಪರಿಣತರೊಬ್ಬರನ್ನು ಸಲಹೆಗಾರರನ್ನಾಗಿ ನೇಮಿಸಿಕೊಳ್ಳಲು ಸಭೆಯಲ್ಲಿ ಅನುಮತಿ ನೀಡಲಾಗಿದೆ. ಈ ಮೂಲಕ `ಮೈಸೂರು ಪೇಂಟ್ಸ್’ ಅನ್ನು ಬ್ರ್ಯಾಂಡ್ ಆಗಿ ಬೆಳೆಸಿ, ಖಾಸಗಿ ಕಂಪನಿಗಳಿಗೆ ಸಡ್ಡು ಹೊಡೆಯಲಾಗುವುದು. ಇದಕ್ಕೆ ಬೇಕಾದ ಸಿದ್ಧತೆಗಳನ್ನು ಈಗಾಗಲೇ ಆರಂಭಿಸಲಾಗಿದೆ ಎಂದು ಹೇಳಿದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments