Wednesday, April 30, 2025
29.2 C
Bengaluru
LIVE
ಮನೆರಾಜ್ಯಬೆಂಗಳೂರಿನ ಅರಮನೆ ಮೈದಾನ ಸರ್ಕಾರದ ವಶಕ್ಕೆ..!?

ಬೆಂಗಳೂರಿನ ಅರಮನೆ ಮೈದಾನ ಸರ್ಕಾರದ ವಶಕ್ಕೆ..!?

 

ಬೆಂಗಳೂರು : ಬೆಂಗಳೂರಿನ ಅರಮನೆ ಮೈದಾನವನ್ನು ಸರ್ಕಾರದ ವಶಕ್ಕೆ ತೆಗೆದುಕೊಳ್ಳುವ ಸಂಬಂಧ ಸುಪ್ರೀಂ ಕೋರ್ಟ್ ನಲ್ಲಿರುವ ಅರ್ಜಿಯನ್ನು ಆದಷ್ಟು ಬೇಗ ಇತ್ಯರ್ಥಗೊಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆಯನ್ನ ನೀಡಿದ್ದಾರೆ.

ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಸೂಕ್ತ ಕ್ರಮ ಜರುಗಿಸುವಂತೆ ಮುಖ್ಯಕಾರ್ಯದರ್ಶಿಗೆ ನಿರ್ದೇಶನ ನೀಡಿದರು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಂದಾಯ ಸಚಿವ ಕೃಷ್ಣಬೈರೇಗೌಡ, ‘ಈ ಜಾಗ ಸಾರ್ವಜನಿಕರದ್ದು ಎಂದು ಕಾನೂನು ಮಾಡಲಾಗಿದೆ.
ಅದನ್ನು ಹೈಕೋರ್ಟ್ ಸಹ ಒಪ್ಪಿದೆ. ಅದರ ವಿರುದ್ಧ ರಾಜವಂಶಸ್ಥರು ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಹಾಕಿದ್ದಾರೆ. ಯಥಾಸ್ಥಿತಿ ಕಾಪಾಡುವಂತೆಯೂ ಸುಪ್ರೀಂಕೋರ್ಟ್ ಸೂಚಿಸಿದೆ. ಸೂಕ್ತ ವಕೀಲರನ್ನು ನೇಮಕ ಮಾಡಿ ಸರ್ಕಾರದ ನಿಲುವಿಗೆ ಪೂರಕವಾಗಿ ಮೂಲ ಆಧಾರಗಳ ಪ್ರಕಾರ ಮುಂದುವರೆಯಬೇಕು ಎಂದು ಮುಖ್ಯಮಂತ್ರಿ ಸೂಚನೆಯನ್ನ ನೀಡಿದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments