Tuesday, January 27, 2026
24 C
Bengaluru
Google search engine
LIVE
ಮನೆರಾಜ್ಯಲೇಔಟ್​ ನಿರ್ಮಾಣ ಕೈಬಿಡದಿದ್ರೆ ಸಿಎಂಗೆ ದೂರು ; ಎಸ್​.ಆರ್.​ ವಿಶ್ವನಾಥ್ ಎಚ್ಚರಿಕೆ!

ಲೇಔಟ್​ ನಿರ್ಮಾಣ ಕೈಬಿಡದಿದ್ರೆ ಸಿಎಂಗೆ ದೂರು ; ಎಸ್​.ಆರ್.​ ವಿಶ್ವನಾಥ್ ಎಚ್ಚರಿಕೆ!

ಬೆಂಗಳೂರು : ಅಕ್ರಮ- ಭ್ರಷ್ಟಚಾರ ವಿಚಾರದಲ್ಲಿ ಯಾವಾಗಲೂ ಮುಂಚೂಣಿಯಲ್ಲಿ ನಿಲ್ಲುವ  ಸರ್ಕಾರಿ ಇಲಾಖೆ ಅಂದರೆ ಅದು ಬಿಡಿಎ. ಒಂದಲ್ಲ ಒಂದು ವಿಚಾರದಲ್ಲೂ ಯಾವಾಗಲೂ ಸುದ್ದಿ ಮಾಡುತ್ತಾಲ್ಲೇ ಇರುತ್ತೆ. ಇದೀಗ ಲೇಔಟ್ ನಿರ್ಮಾಣದ ವಿಚಾರದಲ್ಲಿ ಬಿಡಿಎ ಬಾರಿ ಸುದ್ದಿ ‘ಮಾಡ್ತಿದೆ. ಹೌದು.. ಬೆಂಗಳೂರು ಉತ್ತರ ಭಾಗದಲ್ಲಿ ಬಿಡಿಎ ಹೊಸದಾಗಿ ಡಾ.ಶಿವರಾಮ ಕಾರಂತ ಮುಂದುವರೆದ ಲೇಔಟ್ ನಿರ್ಮಾಣಕ್ಕೆ ಸಿದ್ದತೆ ಮಾಡಿಕೊಳ್ಳುತ್ತಿದೆ.

ಇದು ಯಲಹಂಕ ಸುತ್ತಮುತ್ತಿನ ರೈತರ ಕೆಂಗಣ್ಣಿಗೆ ಗುರಿಯಾಗಿದೆ. ಬಿಡಿಎ ಆಯುಕ್ತ ಎನ್ ಜಯರಾಮ್, ಶಿವರಾಮ ಕಾರಂತ ಮುಂದುವರೆದ ಲೇಔಟ್ ನಿರ್ಮಾಣಕ್ಕೆ ಕಚೇರಿ ಸುತ್ತೋಲೆ ಹೊರಡಿಸಿದ ಬೆನ್ನಲ್ಲೇ ಯಲಹಂಕ ಸುತ್ತಮುತ್ತಿನ ರೈತರು ಬಿಡಿಎ ಕೇಂದ್ರ ಕಚೇರಿ ಮುಂದೆ  ಕಳೆದ ಕೆಲ ದಿನಗಳ ಹಿಂದೆ ಪ್ರತಿಭಟನೆ ನಡೆಸಿ ಕೂಡಲೇ ಶಿವರಾಮ ಕಾರಂತ ಮುಂದುವರೆದ ಲೇಔಟ್ ನಿರ್ಮಾಣ ಕೈಬಿಡಬೇಕೆಂದು ಒತ್ತಾಯಿಸಿದ್ರು.

ಆದರೆ ಬಿಡಿಎ ಆಯುಕ್ತ ಎನ್ ಜಯರಾಮ್ ಪಟ್ಟು ಬಿಡದ ಶಿವರಾಮ ಕಾರಂತ ಮುಂದುವರೆದ ಲೇಔಟ್ ಗೆ ಪ್ರಾಥಮಿಕ ಅಧಿಸೂಚನೆ ಹೊರಡಿಸೋಕೆ ಸಿದ್ದತೆ ಮಾಡಿಕೊಳ್ಳಿತ್ತಿದ್ದಾರೆ. ಇದು ಯಲಹಂಕ ವಿಧಾನಸಭಾ ಕ್ಷೇತ್ರದ ಶಾಸಕ ಎಸ್ ಆರ್ ವಿಶ್ವನಾಥ್ ಅವರ ಕೆಂಗಣ್ಣಿಗೆ ಗುರಿಯಾಗಿದೆ ಎಂದು ಹೇಳಿದರು.

ಕೂಡಲೇ ಶಿವರಾಮ ಕಾರಂತ ಮುಂದುವರೆದ ಲೇಔಟ್ ನಿರ್ಮಾಣ ಕೈಬಿಡಬೇಕು ಅಂತ ಎಸ್ ಆರ್ ವಿಶ್ವನಾಥ್; ಒತ್ತಾಯಿಸಿದ್ದಾರೆ. ಒಂದು ವೇಳೆ ಬಿಡಿಎ ಆಯುಕ್ತರು ಲೇಔಟ್ ನಿರ್ಮಾಣ ಕೈಬಿಡದಿದ್ರೆ ಸಿಎಂ ಸಿದ್ದರಾಮಯ್ಯ ಅವರಿಗೆ ದೂರು ನೀಡಲಾಗ್ತದೆ ಅಂತ ಎಸ್ ಆರ್ ವಿಶ್ವನಾಥ್ ಎಚ್ಚರಿಕೆ ನೀಡಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments