ಬೆಳಗಾವಿ : ಬೆಳಗಾವಿಯಲ್ಲಿ ಕನ್ನಡ ನಾಮಫಲಕ ಕಡ್ಡಾಯವಾಗಿ ಅಳವಡಿಸುವಂತೆ ಕರವೇ ಶಿವರಾಮೇಗೌಡ ಬಣದ ರಾಜ್ಯಾಧ್ಯಕ್ಷ ಶಿವರಾಮೇಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಬೆಳಗಾವಿಯಲ್ಲಿ ಕನ್ನಡ ಬೋರ್ಡ್ ಹಾಕದರಿವುದನ್ನ ಖಂಡಿಸಿ ನಗರದ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ಮೂಲಕ ಜಿಲ್ಲಾಡಳಿತದ ವಿರುದ್ದ ಅಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರಕಾರ 60% ಕನ್ನಡ ಕಡ್ಡಾಯ ಆದೇಶ ನೀಡಿದ್ದರೂ ಕೂಡಾ ಪಾಲಿಸದ ಜಿಲ್ಲಾಡಳಿತ ವಿರುದ್ಧ ಪ್ರೊಟೆಸ್ಟ್ ಮಾಡಿದರು. ಕರವೇ ಶಿವರಾಮೇಗೌಡ ಬಣದಿಂದ ಕಾರ್ಯಕರ್ತರಿಂದ ಪ್ರತಿಭಟನೆ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.