ಬೆಂಗಳೂರು : ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವಕ್ಕೆ ಗುಡ್ಬೈ ಹೇಳಿದ್ದಾರೆ.
ನಾಳೆಯಿಂದಲೇ ಐಪಿಎಲ್ – 2024 ಟೂರ್ನಿ ಆರಂಭವಾಗಲಿದ್ದು, (ಚೆನ್ನೈ ಸೂಪರ್ ಕಿಂಗ್ಸ್) CSK ತಂಡದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಚೆನ್ನೈ ತಂಡ ಆರಂಭಿಕ ಬ್ಯಾಟರ್ ಋತುರಾಜ್ ಗಾಯಕ್ವಾಡ್ ಅವರನ್ನು ನೂತನ ನಾಯಕರಾಗಿ ಆಯ್ಕೆ ಮಾಡಲಾಗಿದೆ.