ದಾವಣಗೆರೆ: ದರ್ಶನ್ ಅಭಿಮಾನಿ ಎಂದು ಹೇಳಿಕೊಂಡಿರುವ ದೊಡ್ಡೇಶ್ ಎಂಬಾತ ನೈತಿಕ ಪೊಲೀಸ್ ಗಿರಿ ಮೆರೆದಿದ್ದು, ದರ್ಶನ್ ಬಗ್ಗೆ ಕೆಟ್ಟದಾಗಿ ಪೋಸ್ಟ್ ಹಾಕಿದ್ದ ಎಂದು ಆರೋಪಿಸಿ ಯುವನೊಬ್ಬನಿಗೆ ಶಿಕ್ಷೆ ನೀಡಿದ್ದಾನೆ. ದಾವಣಗೆರೆಯಲ್ಲಿ ಘಟನೆ ನಡೆದಿದೆ. ತಾನು ಯುವಕನೊಬ್ಬನಿಗೆ ಶಿಕ್ಷೆ ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ. ಬಲವಂತದಿಂದ ಬಸ್ಕಿ ಹೊಡೆಯುವಂತೆ ಮಾಡಿದ್ದು, ಬರಿಗೈನಲ್ಲಿ ಕರ್ಪೂರ ಹಚ್ಚಿ ದರ್ಶನ್ರ ಕಟೌಟ್ಗೆ ಬೆಳಗುವಂತೆ ಆದೇಶಿಸಿದ್ದಾನೆ. ಭಯಗೊಂಡ ಯುವ ಹೇಳಿದಂತೆ ಬರಿಗೈಯಲ್ಲಿ ಕರ್ಪೂರ ಹಚ್ಚಿಕೊಂಡು ಅರತಿ ಮಾಡಿದ್ದಾನೆ.
ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ವಡ್ನಹಳ್ಳಿ ಗ್ರಾಮದ ಯುವಕ ಲಿಂಗರಾಜು ಎಂಬಾತ ನಟ ದರ್ಶನ್ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಹಾಕಿದ್ದನು. ಈ ಯುವಕ ಪುನೀತ್ ಅಭಿಮಾನಿ ಎಂದು ಹೇಳಲಾಗಿದೆ. ನಿನ್ನೆ ದಾವಣಗೆರೆ ಗೀತಾಂಜಲಿ ಥಿಯೇಟರ್ ಬಳಿ ಯುವಕನ ಬರಿಗೈಯಲ್ಲಿ ಕರ್ಪೂರ ಬೆಳಗಿಸಿ ಬಸ್ಕಿ ಹೊಡೆಸಿ ಡೊಡ್ಡೆಶ್ ಶಿಕ್ಷೆ ನೀಡಿದ್ದಾನೆ. ಸಾಮಾಜಿಕ ಜಾಲತಾಣದಲ್ಲಿ ನೈತಿಕ ಪೊಲೀಸ್ ಗಿರಿಯ ವಿಡಿಯೋ ವೈರಲ್ ಆಗಿದೆ.